
ಬೆಂಗಳೂರು(ಜ.13): ಲೋಕಸಭೆ ಚುನಾವಣೆಯಲ್ಲಿ ವಹಿಸಿದ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಸಚಿವರು ಸೋತರೆ ಅವರ ತಲೆದಂಡವಾಗುತ್ತದೆ ಎಂದು ಹೈಕಮಾಂಡ್ ಹೇಳಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಅವರು 'ಸಚಿವರ ತಲೆದಂಡದ ಬಗ್ಗೆ ಹೈ ಕಮಾಂಡ್ ಎಚ್ಚರಿಕೆ ನೀಡಿದೆಯೇ' ಎಂಬ ಪ್ರಶ್ನೆಗೆ, 'ಪರಿಣಾಮ ಎದುರಿಸಬೇಕಾಗುತ್ತದೆ ಎಂದಾಗಲೀ ತಲೆದಂಡ ಎಂದಾಗಲೀ ಹೈಕಮಾಂಡ್ ಹೇಳಿಲ್ಲ. ಗಂಭೀರವಾಗಿ ಕೆಲಸ ಮಾಡಿ ಎಂದು ಹೇಳಿದೆ. ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ತಿಳಿಸಿದೆ' ಎಂದರು.
ಏರ್ಪೋರ್ಟ್ಗಳ ಸುತ್ತ 10,000 ಎಕರೆ ಕೈಗಾರಿಕಾ ಪಾರ್ಕ್: ಸಚಿವ ಎಂ.ಬಿ.ಪಾಟೀಲ
ಡಿಸಿಎಂ ಬಗ್ಗೆ ಹೇಳಿಕೆ ನೀಡದಂತೆ ತಾಕೀತು:
'ಹೆಚ್ಚುವರಿ ಉಪ ಮುಖ್ಯಮಂತ್ರಿ ವಿಚಾರವಾಗಿ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು. ನಮಗೆ ಲೋಕಸಭಾ ಚುನಾವಣೆ ಮುಖ್ಯವಿದ್ದು, ಈ ಹಂತದಲ್ಲಿ ಯಾರೂ ಹೇಳಿಕೆಗಳನ್ನು ಕೊಡಬೇಡಿ' ಎಂದು ದೆಹಲಿ ನಾಯಕರು ಸೂಚಿಸಿದ್ದಾರೆ ಎಂದು ಇದೇ ವೇಳೆ ಎಂ.ಬಿ. ಪಾಟೀಲ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.