ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ

Published : Jun 06, 2021, 03:51 PM IST
ಸಿಎಂ ರಾಜೀನಾಮೆ ಮಾತು: ಪರ್ಯಾಯ ನಾಯಕರು ಬೇಕಾದಷ್ಟು ಇದ್ದಾರೆ ಎಂದ ಸಚಿವ

ಸಾರಾಂಶ

* ಮುಖ್ಯಮಂತ್ರಿ ಬಾಯಿಂದಲೇ ರಾಜೀನಾಮೆ ಮಾತು * ರಾಜ್ಯ ಬಿಜೆಪಿಯಲ್ಲಿ ಸಂಚಲನ * ಪರ್ಯಾಯ ನಾಯಕರು ಬೇಕಾದಷ್ಟು ಜನ ಇದ್ದಾರೆ ಎಂದ ಸಚಿವ

ಚಿಕ್ಕಬಳ್ಳಾಪುರ, (ಜೂನ್.06): ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯಯೂರಪ್ಪ ಅವರು ಕಡ್ಡಿ ಮುರಿದಂತೆ ಹೇಳಿದ್ದು, ರಾಜ್ಯ ಬಿಜೆಪಿ ಸಂಚಲನ ಮೂಡಿಸಿದೆ.

ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಕೊಟ್ಟು ಹೋಗುತ್ತೇನೆ ಎಂದು ಸಿಎಂ ಹೇಳಿದ್ದೇ ತಡ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ.

ರಾಜೀನಾಮೆ ಕೊಟ್ಟು ಹೋಗ್ತೀನಿ: ಸಿಎಂ ಮಾತಿಗೆ ಅಧ್ಯಕ್ಷರ ಪ್ರತಿಕ್ರಿಯೆ

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಎಂ.ಟಿ.ಬಿ.ನಾಗರಾಜ್, ಬಿಜೆಪಿಯಲ್ಲಿ ಪರ್ಯಾಯ ನಾಯಕರು ಬೇಕಾದಷ್ಟು ಜನ ಇದ್ದಾರೆ. ಎರಡು ಮೂರು ಬಾರಿ ಮಂತ್ರಿಗಳಾಗಿದ್ದು, ಸಿಎಂ ಸ್ಥಾನ ನಿಭಾಯಿಸಬಲ್ಲ‌ ನಾಯಕರಿದ್ದಾರೆ, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಏನೇ‌ ನಿರ್ಧಾರ ತೆಗೆದುಕೊಂಡರೂ ನಾವು ‌ಬದ್ಧರಾಗಿರುತ್ತೇವೆ ಎಂದರು.

ದೆಹಲಿಯಲ್ಲಿ ಏನೋ ಒಂದು ರೀತಿ ಬೆಳವಣಿಗೆಗಳು ಆಗುತ್ತಿವೆ. ಏನು ಬೆಳವಣಿಗೆ ಆಗುತ್ತಿದೆ ಅನ್ನೋದು ಎರಡು ಮೂರು ದಿನಗಳಲ್ಲಿ ಗೊತ್ತಾಗಲಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದರು.

ನಾನು ಹತ್ತಾರು ಬಾರಿ ಹೇಳಿದ್ದೇನೆ. ಹೈಕಮಾಂಡ್ ಯಾವುದೇ ತಿರ್ಮಾನ ತೆಗೆದುಕೊಂಡರೂ ಯಡಿಯೂರಪ್ಪ ಒಪ್ಪಿಕೊಳ್ತಾರೆ. ಪಕ್ಷಕ್ಕಿಂತ ವ್ಯಕ್ತಿ ದೊಡ್ಡವರಲ್ಲ, ಪಕ್ಷ ದೊಡ್ಡದು. ಬಿಎಸ್​​ವೈ ಪಕ್ಷವನ್ನ ಕಟ್ಟಿ‌ಬೆಳೆಸಿದ್ದಾರೆ, ಆದರೆ ಅವರಿಗೆ ಸ್ವಲ್ಪ ಸಮಸ್ಯೆಯಿದೆ. ವಯಸ್ಸಾಗಿದೆ, ಆರೋಗ್ಯ ಸಮಸ್ಯೆಯಿದೆ, ಆದರೂ ದಿನಕ್ಕೆ 12 ಗಂಟೆ ಕೆಲಸ ಮಾಡ್ತಿದ್ದಾರೆ. ಇವತ್ತು ಅವರಾಗಿಯೇ ಹೇಳಿದ್ದಾರೆ, ಹೈಕಮಾಂಡ್ ಹೇಳಿದ್ರೆ ಅವರು ಬದ್ದವಾಗಿಯೇ ಇದ್ದಾರೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಕನ್ನಡಪ್ರಭ’ ಡ್ರಗ್ಸ್‌ ಅಭಿಯಾನ ವಿಧಾನಪರಿಷತ್ತಲ್ಲಿ ಪ್ರತಿಧ್ವನಿ
ಇಂದು 20,000 ರೈತರ ಜತೆ ಬಿಜೆಪಿ ಸುವರ್ಣಸೌಧ ಮುತ್ತಿಗೆ