ಅಧಿಕಾರದ ತೆವಲಿಗಾಗಿ ಕುಮಾರಸ್ವಾಮಿಯಿಂದ ಕ್ಷೇತ್ರ ಬದಲಾವಣೆ: ಸಚಿವ ಚಲುವರಾಯಸ್ವಾಮಿ

Published : Nov 07, 2024, 11:35 AM IST
ಅಧಿಕಾರದ ತೆವಲಿಗಾಗಿ ಕುಮಾರಸ್ವಾಮಿಯಿಂದ ಕ್ಷೇತ್ರ ಬದಲಾವಣೆ: ಸಚಿವ ಚಲುವರಾಯಸ್ವಾಮಿ

ಸಾರಾಂಶ

ಕೇಂದ್ರ ಸಚಿವ ಕುಮಾರಸ್ವಾಮಿಯವರು ತಮ್ಮ ಅಧಿಕಾರದ ತೆವಲಿಗಾಗಿ ಕ್ಷೇತ್ರ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಕ್ಷೇತ್ರದ ಜನರು ಅಭಿವೃದ್ಧಿಗೆ ಮತ ಹಾಕುವ ನಿರ್ಣಯ ಮಾಡಿದ್ದಾರೆ. ಇನ್ನಾದರೂ ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಚುನಾವಣೆಯಿಂದ ದೂರ ಸರಿಯಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದರು. 

ರಾಮನಗರ (ನ.07): ಕೇಂದ್ರ ಸಚಿವ ಕುಮಾರಸ್ವಾಮಿಯವರು ತಮ್ಮ ಅಧಿಕಾರದ ತೆವಲಿಗಾಗಿ ಕ್ಷೇತ್ರ ಬದಲಾವಣೆ ಮಾಡುತ್ತಲೇ ಬಂದಿದ್ದಾರೆ. ಕ್ಷೇತ್ರದ ಜನರು ಅಭಿವೃದ್ಧಿಗೆ ಮತ ಹಾಕುವ ನಿರ್ಣಯ ಮಾಡಿದ್ದಾರೆ. ಇನ್ನಾದರೂ ಚನ್ನಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಚುನಾವಣೆಯಿಂದ ದೂರ ಸರಿಯಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವ್ಯಾರು ಕುಮಾರಸ್ವಾಮಿ ಅವರನ್ನು ಚನ್ನಪಟ್ಟಣ ಬಿಟ್ಟು ಹೋಗಿ ಅಂತ ಹೇಳಿಲ್ಲ. ನಿಮ್ಮ ಅನುಕೂಲಕ್ಕೆ ಕ್ಷೇತ್ರ ಬಿಡುವುದಾದರೆ, ಜನರ ಅನುಕೂಲ ನೋಡುವವರು ಯಾರು ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಗೆ ರಾಮನಗರ, ಚನ್ನಪಟ್ಟಣ ಬಗ್ಗೆ ಪ್ರೀತಿ ಇದ್ದರೆ ಅಭಿವೃದ್ಧಿ ಕಾರಣಕ್ಕಾಗಿಯಾದರೂ ಕ್ಷೇತ್ರ ಬಿಡಬೇಕು. ನಿಮ್ಮ ಅನುಕೂಲಕ್ಕೆ ಲೋಕಸಭಾ ಸದಸ್ಯರಾದಿರಿ, ನಿಮ್ಮ ತೆವಲಿಗೆ ನೀವು ಬದಲಾದರೆ ನಾವು ನಿಮ್ಮ ಹಿಂದೆ ಬರಬೇಕೆ ಎಂದು ಚನ್ನಪಟ್ಟಣ ಜನರೇ ಕೇಳುತಿದ್ದಾರೆ. ರಾಮನಗರದಿಂದ ಚನ್ನಪಟ್ಟಣಕ್ಕೆ ಬಂದರು. ಚನ್ನಪಟ್ಟಣದಿಂದ ಮಂಡ್ಯಕ್ಕೆ ಬಂದಿದ್ದಾಯಿತು. ಮುಂದಿನ ವಿಧಾನಸಭಾ ಚುನಾವಣೆ ವೇಳೆಗೆ ಮತ್ತೊಮ್ಮೆ ಕ್ಷೇತ್ರ ಬದಲಾಯಿಸುತ್ತಾರೆ ಎಂದು ಕಿಡಿಕಾರಿದರು.

ಹಿರಿಯ ಸಾಹಿತಿ ಬಂಜಗೆರೆ ಸೇರಿ 15 ಮಂದಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಅಭಿವೃದ್ಧಿಗಾಗಿ ಕೈ ಬೆಂಬಲಿಸಿ: ದೇವೇಗೌಡರು ಹಾಸನದಲ್ಲಿ ಹುಟ್ಟಿದ್ದರೂ ರಾಮನಗರ ಜಿಲ್ಲೆ ಅವರ ಕುಟುಂಬಕ್ಕೆ ಕಾಮಧೇನಾಗಿದೆ. ರಾಮನಗರ ಜಿಲ್ಲೆ ಕುಮಾರಸ್ವಾಮಿಗೆ ಇಲ್ಲಿಯವರೆಗೂ ಗೆಲುವು ಕೊಟ್ಟಿದೆ. ಆದರೆ, ಕುಮಾರಸ್ವಾಮಿ ರಾಮನಗರ ಜಿಲ್ಲೆಗೆ ಯಾವ ಕೊಡುಗೆಯನ್ನೂ ಕೊಟ್ಟಿಲ್ಲ. ಯೋಗೇಶ್ವರ್ ಸ್ಥಳೀಯರು, ಕೈಗೆ ಸಿಗುವ ವ್ಯಕ್ತಿ, ತಾಲೂಕಿಗೆ ನೀರಾವರಿ ತಂದವರು, ಉಪಮುಖ್ಯಮಂತ್ರಿ ನೀರಾವರಿ ಸಚಿವರಾಗಿರುವ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಒತ್ತು ಕೊಟ್ಟವರು. 

ಉಪಮುಖ್ಯಮಂತ್ರಿಗಳು ಈಗಾಗಲೇ ಚನ್ನಪಟ್ಟಣ ಅಭಿವೃದ್ಧಿಗೆ 500 ಕೋಟಿ ರು. ಘೋಷಣೆ ಮಾಡಿದ್ದಾರೆ. ಮೂರೂವರೆ ವರ್ಷ ಚನ್ನಪಟ್ಟಣದ ಅಭಿವೃದ್ಧಿಗಾಗಿ ಜನ ಮತ ಹಾಕುವಂತೆ ಚಲುವರಾಯಸ್ವಾಮಿ ಮನವಿ ಮಾಡಿದರು. ಕುಮಾರಸ್ವಾಮಿ ಅವರನ್ನು ನಾವ್ಯಾರು ಟಾರ್ಗೆಟ್ ಮಾಡುತ್ತಿಲ್ಲ. ನಾವು ಇಲ್ಲಿವರೆಗೂ ಅವರನ್ನು ಬೈದಿಲ್ಲ. ನಾವು ಅವರನ್ನು ವಿರೋಧಿಗಳು ಎಂದು ಎಲ್ಲಿಯೂ ಹೇಳಿಲ್ಲ. ಅವರೇ ನಮ್ಮನ್ನು ಬೈದುಕೊಂಡು ತಿರುಗಾಡುತ್ತಿದ್ದಾರೆ.

ಗೌಡರ ಮಾತಿಗೆ ಕೌಂಟಲ್ ಕೊಡಲ್ಲ: ನಿಖಿಲ್ ನನ್ನ ಮಗನಿದ್ದಂತೆ, ಅವರಿಗೆ ವಿರುದ್ಧವಾಗಿ ಮಾತನಾಡುವ ಅಗತ್ಯವಿಲ್ಲ. ದೇವೇಗೌಡರು ಹಿರಿಯ ರಾಜಕಾರಣಿಗಳು ಅವರಿಗೆ ಯಾರ ಬಗ್ಗೆಯಾದರೂ ಮಾತನಾಡುವ ಹಿರಿತನವಿದೆ. ಅವರು ಯಾರಿಗೆ ಬೇಕಾದರೂ ಸೊಕ್ಕು ಮುರಿಯುತ್ತೇನೆ, ಜಾಡಿಸಿ ಒದೆಯುತ್ತೇನೆ ಎಂದು ಹೇಳಬಹುದು. ಅವರ ಮಾತುಗಳೇ ಅವರಿಗೆ ಮುಳುವಾಗಲಿದೆ. ಅವರ ಮಾತಿಗೆ ನಾವು ಕೌಂಟರ್ ಕೊಡಲು ಆಗುವುದಿಲ್ಲ ಎಂದು ಹೇಳಿದರು. ರಾಜಕಾರಣದಲ್ಲಿ ಪಕ್ಷಾಂತರ ಸಾಮಾನ್ಯ. ಜನತಾದಳವೇ ಅನೇಕ ಪಕ್ಷಗಳಾಗಿ ಬದಲಾವಣೆ ಆಗಿದೆ. ಅದೂ ಪಕ್ಷಾಂತರದ ಮಾದರಿಯೇ ಆಗಿತ್ತು. ಪಕ್ಷದಿಂದ ಯಾರಾದರೂ ಹೊರಗೆ ಹೋದರೆ, ಅದು ಅವರಿಗೆ ನಷ್ಟ. ಪಕ್ಷ ಬದಲಾವಣೆಗೆ ಯೋಗೇಶ್ವರ್ ಅವರನ್ನು ದೂರಿದರೆ ತಪ್ಪು. ಅನೇಕ ಕಾರಣಗಳಿಂದ ಅವರು ಪಕ್ಷ ಬದಲಿಸಿದ್ದಾರೆ. ಈಗ ಬಿಜೆಪಿ ಬಿಡಲು ಕುಮಾರಸ್ವಾಮಿ ಕಾರಣ ಎಂದು ದೂರಿದರು.

10 ಸಾವಿರ ಅರ್ಹ ಫಲಾನುಭವಿಗಳ ಬಿಪಿಎಲ್‌ ಕಾರ್ಡ್‌ಗಳು ರದ್ದು: ಯಾಕೆ ಗೊತ್ತಾ?

ನಿಖಿಲ್ ಗೆ ಚನ್ನಪಟ್ಟಣದಲ್ಲಿ ಅನ್ಯಾಯ ಆಗಿಲ್ಲ. ಚನ್ನಪಟ್ಟಣಕ್ಕೂ ನಿಖಿಲ್ ಗೆ ಎದುರಾದ ಹಿಂದಿನ ಸೋಲಿಗೂ ಯಾವುದೇ ಸಂಬಂಧ ಇಲ್ಲ, ಎರಡು ಬಾರಿ ಚನ್ನಪಟ್ಟಣದಿಂದ ಗೆದ್ದ ಕುಮಾರಸ್ವಾಮಿ ಕ್ಷೇತ್ರದ ಜನರ ಕೈಗೂ ಸಿಗಲಿಲ್ಲ, ಗೆಲ್ಲಿಸಿದ ಜನರ ಸಮಸ್ಯೆಗೂ ಸ್ಪಂದಿಸಲಿಲ್ಲ. ಆದರೆ, ಯೋಗೇಶ್ವರ್ ಅವರಿಗೆ ಎರಡು ಬಾರಿ ಸೋಲುಂಡು ಅನ್ಯಾಯ ಆಗಿದೆ. 4 ಬಾರಿ ಆಯ್ಕೆಯಾಗಿ ಸಚಿವರಾಗಿ , ವಿಧಾನ ಪರಿಷತ್ ಸದಸ್ಯರಾಗಿ ಚನ್ನಪಟ್ಟಣ ಅಭಿವೃದ್ಧಿ ಮಾಡಿದ್ದಾರೆ. ಚನ್ನಪಟ್ಟಣ ಅಭಿವೃದ್ಧಿಗೆ ಶ್ರಮಿಸಿದವರಿಗೆ ಕಾಂಗ್ರೆಸ್ ಅವಕಾಶ ನೀಡಿದೆ. ರಾಜಕೀಯದಲ್ಲಿ ಪಕ್ಷ ಬದಲಾವಣೆ ಸಹಜ ಪ್ರಕ್ರಿಯೆ, ಇದಕ್ಕೆ ಯೋಗೇಶ್ವರ್ ದೂರುವುದರಲ್ಲಿ ಅರ್ಥವಿಲ್ಲ, ಭವಿಷ್ಯದಲ್ಲೂ ಯೋಗೇಶ್ವರ್ ಕಾಂಗ್ರೆಸ್ ನಲ್ಲೇ ಉಳಿಯುತ್ತಾರೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ