
ನಾಗಮಂಗಲ (ಸೆ.20): ನಾನು ರಾಜಕೀಯ ಮಾಡಲು ಅಥವಾ ಯಾವುದೇ ಕುಮ್ಮಕ್ಕು ಕೊಟ್ಟು ಬೆಂಕಿ ಹಚ್ಚಲು ನಾಗಮಂಗಲಕ್ಕೆ ಬಂದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಚಿವ ಚಲುವರಾಯಸ್ವಾಮಿ ತಿರುಗೇಟು ಕೊಟ್ಟರು. ಸಂಸದರ ಕೆಲಸ ಬಿಟ್ಟು ಇಲ್ಲಿಗೆ ಬರ್ತಿದ್ದಾರೆಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸಂಸದರಾದವರು ಆರಾಮವಾಗಿ ದೆಹಲಿಯಲ್ಲಿರಬೇಕಾ. ನಾನು ಮಂಡ್ಯ ಜಿಲ್ಲೆಯ ಜನಪ್ರತಿನಿಧಿ. ಜನರ ಕಷ್ಟ ಬಗೆಹರಿಯದಿದ್ದಾಗ ನಾನು ಬರಲೇಬೇಕು ಎಂದರು.
ನಾನು ಕೇವಲ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿಲ್ಲ. ಮೊನ್ನೆ ದೆಹಲಿಯಲ್ಲಿ ನಡೆದ ಕ್ಯಾಬಿನೆಟ್ನಲ್ಲಿ ಭಾಗವಹಿಸಿದ ನಂತರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆಯಲ್ಲಿದ್ದ ಎರಡು ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆಯ ಬಳಿಕ ಛತ್ತೀಸ್ಘಟದಲ್ಲಿ ಇಲಾಖೆಗೆ ಸಂಬಂಧಿಸಿದ ಪುನರ್ ಪರಿಶೀಲನಾ ಸಭೆ ನಡೆಸಿದ್ದೇನೆ ಎಂದರು. ಬುಧವಾರವೂ ಕೆಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೇನೆ. ಇಂದು ಬೆಳಗ್ಗೆ ಮುಂಬೈಗೆ ತೆರಳಿ ಸಭೆ ಮುಗಿಸಿಕೊಂಡು ಇಲ್ಲಿಗೆ ಬಂದಿದ್ದೇನೆ. ಜಿಲ್ಲೆಯಲ್ಲಿ ಯಾವುದೇ ಸಣ್ಣ ಪುಟ್ಟ ಘಟನೆಗಳು ಸಂಭವಿಸಿದಾಗ ಅದಕ್ಕೆ ಸ್ಪಂದಿಸಬೇಕಿರುವುದು ನನ್ನ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿರುಗೇಟು ನೀಡಿದರು.
ಹೊರಗಿನವರ ಮಾತಿಗೆ ಕಿವಿಗೊಡಲ್ಲ: ನಾಗಮಂಗಲದಲ್ಲಿ ಗಲಭೆ ಸಂಭವಿಸಲು ಕಾಂಗ್ರೆಸ್ ಕಾರಣ ಎಂದಿದ್ದಾರೆ, ಬಿಜೆಪಿಯವರೂ ಅದನ್ನೇ ಹೇಳಿದ್ದಾರೆ. ಹೊರಗಿನವರು ನೂರು ರೀತಿ ಮಾತನಾಡಲಿ. ನನಗೆ ನಾಗಮಂಗಲ ಕ್ಷೇತ್ರದ ಜನರ ಹಿತ ಮುಖ್ಯ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗಲಭೆ ಸಮಯದಲ್ಲಿ ಮೊದಲು ಬೆಂಕಿ ಹಾಕಿದವರು ಯಾರು, ಯಾವ ಅಂಗಡಿಗೆ ಬೆಂಕಿ ಹಾಕಿದರು ಎಂಬೆಲ್ಲಾ ಮಾಹಿತಿಯೂ ಇದೆ. ಆದರೆ, ನಾನು ಈ ಸಮಯದಲ್ಲಿ ಯಾವುದೇ ಪಕ್ಷ ಅಥವಾ ಸಮುದಾಯದ ಬಗ್ಗೆ ಮಾತನಾಡುವುದಿಲ್ಲ. ಮೊದಲು ನನಗೆ ಕ್ಷೇತ್ರದ ಕಾನೂನು ಸುವ್ಯವಸ್ಥೆ ಸರಿಯಾಗಬೇಕು.
ಹಿರಿಯ ಕಲಾವಿದರಿಗೆ ಇನ್ಮುಂದೆ ₹3000 ಮಾಶಾಸನ: ಸಿಎಂ ಸಿದ್ದರಾಮಯ್ಯ ಘೋಷಣೆ
ಪ್ರಕರಣ ಕುರಿತಂತೆ ಈಗಾಗಲೇ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಅಗತ್ಯಬಿದ್ದರೆ ಉನ್ನತಮಟ್ಟದ ಸಮಿತಿ ರಚಿಸಿ ವಿಶೇಷ ತನಿಖೆ ಮಾಡೋಣ ಎಂದು ತಿಳಿಸಿದರು. ಗಲಭೆಗೆ ಸಂಬಂಧಿಸಿದಂತೆ ಸಿಸಿ ಟಿವಿ ಆಧರಿಸಿ ಬಂಧಿಸಿದರೆ ೫೦೦ ಜನ ಆಗುತ್ತಾರೆ. ಗಣೇಶನ ಮೆರವಣಿಗೆ ತಂಡದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಪುತ್ರ ಇದ್ದ ಕಾರಣಕ್ಕೆ ಆತನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿರುವುದು ನಿಜ. ಚಾರ್ಜ್ಶೀಟ್ನಲ್ಲಿ ಅವರನ್ನು ಕೈಬಿಡಲು ಸೂಚನೆ ನೀಡಿದ್ದೇನೆ. ಇಡೀ ಪ್ರಕರಣಕ್ಕೆ ಕಾರಣಕರ್ತ ಯಾರೆಂದು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.