ಸರ್ಕಾರ ಬೀಳಿಸುವ ಕನಸನ್ನು ಕುಮಾರಸ್ವಾಮಿ ಕಾಣಲಿ: ಚಲುವರಾಯಸ್ವಾಮಿ

Published : Oct 11, 2023, 11:23 AM IST
ಸರ್ಕಾರ ಬೀಳಿಸುವ ಕನಸನ್ನು ಕುಮಾರಸ್ವಾಮಿ ಕಾಣಲಿ: ಚಲುವರಾಯಸ್ವಾಮಿ

ಸಾರಾಂಶ

2024ಕ್ಕೆ ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ. ಚುನಾವಣೆ ನಂತರ ಈ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ತೇಲಾಡುತ್ತಿದ್ದಾರೆ. ಅದರಿಂದಲೇ ಕುಮಾರಸ್ವಾಮಿ ಅವರಿಗೆ ನಿದ್ರೆ ಬರುತ್ತೆ ಎನ್ನುವುದಾದರೆ ಅ ರೀತಿಯ ಕನಸು ಕಾಣಲಿ: ಸಚಿವ ಎನ್‌.ಚಲುವರಾಯಸ್ವಾಮಿ 

ನಾಗಮಂಗಲ(ಅ.11):  ಹಾಲಿ ಇರುವ ಕಾಂಗ್ರೆಸ್‌ ಸರ್ಕಾರ ಬೀಳುತ್ತೆ, ಮತ್ತೆ ರಾಜ್ಯದಲ್ಲಿ ಚುನಾವಣೆ ನಡೆಯುತ್ತೆ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಕುಮಾರಸ್ವಾಮಿ ಕನಸು ಕಾಣುವುದಾದರೆ ಕಾಣಲಿ. ಅವರ ಕನಸಿಗೆ ನಾವು ಅಡ್ಡಿ ಮಾಡುವುದಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಬೆಳ್ಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 2024ಕ್ಕೆ ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ. ಚುನಾವಣೆ ನಂತರ ಈ ಸರ್ಕಾರ ಬಿದ್ದುಹೋಗಲಿದೆ ಎಂಬ ಭ್ರಮೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ತೇಲಾಡುತ್ತಿದ್ದಾರೆ. ಅದರಿಂದಲೇ ಕುಮಾರಸ್ವಾಮಿ ಅವರಿಗೆ ನಿದ್ರೆ ಬರುತ್ತೆ ಎನ್ನುವುದಾದರೆ ಅ ರೀತಿಯ ಕನಸು ಕಾಣಲಿ ಎಂದು ಕುಟುಕಿದರು.

ಕಾವೇರಿ, ಬರ ಸಮಸ್ಯೆ ಆಲಿಸುವುದಕ್ಕೆ ಕೇಂದ್ರ ನಿರಾಸಕ್ತಿ: ಚಲುವರಾಯಸ್ವಾಮಿ

2023ರ ವಿಧಾನಸಭೆ ಚುನಾವಣೆ ಸಮಯದಲ್ಲೂ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಾನೇ ಸಿಎಂ ಆಗುತ್ತೇನೆ ಎಂಬ ಕನಸು ಕಂಡಿದ್ದರು. ಅದಕ್ಕಾಗಿ ಅವರು ಪಂಚರತ್ನ ಯಾತ್ರೆಯನ್ನೂ ಮಾಡಿದರು. ಜನರು ಪಂಚರತ್ನ ನಂಬಲಿಲ್ಲ. ಕಾಂಗ್ರೆಸ್ ಕಾರ್ಯಕ್ರಮಗಳನ್ನು ನಂಬಿ ಕೈ ಹಿಡಿದರು ಎಂದು ತಿಳಿಸಿದರು.

ಏನಾದರೂ ಮಾಡಿ ಈ ರೀತಿ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದಲ್ಲಿ ಗೊಂದಲ ಸೃಷ್ಬಿ ಮಾಡಬೇಕು ಎಂದುಕೊಂಡಿದ್ದಾರೆ. ಡಿ.ಕೆ.ಶಿವಕುಮಾರ್‌ ಮತ್ತು ಕಾಂಗ್ರೆಸ್ ಬಗ್ಗೆ ಮಾತನಾಡಿದರೆ ಅವರಿಗೆ ನಿದ್ದೆ ಬರುತ್ತೆ ಎನ್ನುವುದಾದರೆ ಮಾತನಾಡಲಿ. ಅವರು ಚೆನ್ನಾಗಿ ನಿದ್ದೆ ಮಾಡಬೇಕು, ಆರೋಗ್ಯವಂತರಾಗಿ ಇರಬೇಕು ಎಂಬುದು ನಮ್ಮ ಆಸೆ ಎಂದು ಕುಹಕವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!