
ಚನ್ನಪಟ್ಟಣ(ನ.10): ಎಚ್.ಡಿ.ದೇವೇಗೌಡ ಅವರ ನೇತೃತ್ವದ ಸರ್ಕಾರವೇ 5 ವರ್ಷ ಇರಲಿಲ್ಲ. ಇನ್ನು ಬೇರೆಯವರ ಸರ್ಕಾರ ಪೂರ್ಣಾವಧಿ ಪೂರೈಸಲು ಬಿಡ್ತಾರಾ. ಅದಕ್ಕೆ ಕಾಂಗ್ರೆಸ್ ಸರ್ಕಾರ ಕಿತ್ತುಹಾಕುತ್ತೇವೆ ಅಂತಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ಸಿಎಂ ಆಗಿ 5 ವರ್ಷ ಇದ್ರಾ? ಪ್ರಧಾನಿಯಾಗಿ 5 ವರ್ಷ ಅಧಿಕಾರ ಮಾಡಿದ್ರಾ? ಅವರ ನೇತೃತ್ವದ ಸರ್ಕಾರ ಇದ್ದಾಗಲೇ 5 ವರ್ಷ ಆಡಳಿತ ಮಾಡಿಲ್ಲ. ಇನ್ನೂ ಬೇರೆಯವರು ಸರ್ಕಾರ ಮಾಡಿದ್ರೆ ಸುಮ್ಮನೆ ಇರ್ತಾರಾ, ಅದಕ್ಕೆ ಕಾಂಗ್ರೆಸ್ ಸರ್ಕಾರ ಕಿತ್ತುಹಾಕುತ್ತೇವೆ ಅಂತಾರೆ ಎಂದರು.
ನನ್ನಣ್ಣ 23ನೇ ವಯಸ್ಸಲ್ಲೇ ದೇವೇಗೌಡರ ವಿರುದ್ಧ ತೊಡೆ ತಟ್ಟಿದ್ದರು: ಡಿ.ಕೆ.ಸುರೇಶ್
ಗೌಡರಿಗೆ ಅವರದ್ದೇ ಸರ್ಕಾರದ ಮೇಲೆ ನಂಬಿಕೆ ಇರ್ಲಿಲ್ಲ. ಅವರ ಅವಧಿಯಲ್ಲಿ ಶಾಸಕರು ಮನೆಗೆ ಹೋದ್ರೆ ಈ ಸರ್ಕಾರ 2 ವರ್ಷ ಇರಲ್ಲ ಅನ್ನುತ್ತಿದ್ದರು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.