ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಹೋಗಿದ್ದಾರೆ: ಸಚಿವ ಚಲುವರಾಯಸ್ವಾಮಿ

Published : Mar 27, 2024, 09:31 AM ISTUpdated : Mar 27, 2024, 09:37 AM IST
ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಬಿಜೆಪಿ ಜೊತೆ ಹೋಗಿದ್ದಾರೆ: ಸಚಿವ ಚಲುವರಾಯಸ್ವಾಮಿ

ಸಾರಾಂಶ

ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಮಕ್ಕಳಿಗೋಸ್ಕರ, ತಮ್ಮ ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಈಗ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಟೀಕಿಸಿದ ಸಚಿವ ಎನ್. ಚಲುವರಾಯಸ್ವಾಮಿ 

ಮಂಡ್ಯ(ಮಾ.27):  ಪುಟ್ಟರಾಜುಗೆ ನೋಡಿದ ಹುಡ್ಗೀನಾ ಕುಮಾರಸ್ವಾಮಿಯವರು ಮದುವೆಯಾಗೋದು ಸರಿನಾ? ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕುಮಾರಸ್ವಾಮಿಯವರ ಮಂಡ್ಯ ಸ್ಪರ್ಧೆ ವಿರುದ್ಧ ಕಿಡಿ ಕಾರಿದರು. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಹೇಳಿ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಟೆಂಪಲ್ ರನ್ ಮಾಡಿಸಿ ಈಗ ಟಿಕೆಟ್ ತಪ್ಪಿಸಿದ್ದಾರೆ. ಈಗ ಯಾಕೋ ಆಗ್ತಾ ಇಲ್ಲ ಕಣಯ್ಯ. ನೀನು ನೋಡಿದ ಹುಡುಗಿ ಸ್ವಲ್ಪ ಚೆನ್ನಾಗಿದ್ದಾಳೆ. ಹಾಗಾಗಿ ನಾನೇ ಮದುವೆಯಾಗಬೇಕು ಅಂತ ಬಯಸಿದ್ದೇನೆ. ನಿನಗೆ ಮುಂದೆ ಒಳ್ಳೆಯ ಹುಡುಗಿ ನೋಡೋಣ ಅಂದಿದ್ದಾರಂತೆ. ಮಗನ ಮದುವೆ ಮಾಡೋಕೆ ಹೋಗಿ ಅಪ್ಪನೇ ಮದುವೆಯಾದ ಎಂಬಂತಾಗಿದೆ ಎಂದು ಕುಹಕವಾಡಿದರು.

ಲೋಕಸಭಾ ಚುನಾವಣೆ 2024: ಮಂಡ್ಯದಿಂದ ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧೆ ಖಚಿತ..!

ಈಗ ಪುಟ್ಟರಾಜು ಕತೆ ಏನಾಗಬೇಕು. ನಾನು ಹೇಗೋ ಕಾಂಗ್ರೆಸ್ ಸೇರಿ ಬಚಾವಾದೆ. ಆದರೆ, ಪುಟ್ಟರಾಜು ಕತೆ ಮುಗಿತು. ಮಕ್ಕಳಿಗೋಸ್ಕರ, ತಮ್ಮ ಕುಟುಂಬಕ್ಕೋಸ್ಕರ ಕುಮಾರಸ್ವಾಮಿಯವರು ಈಗ ಬಿಜೆಪಿ ಜೊತೆ ಹೋಗಿದ್ದಾರೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ