
ಮಂಡ್ಯ, (ಜುಲೈ.09): ಕೆಆರ್ಎಸ್ ಅಣೆಕಟ್ಟೆಯಲ್ಲಿ ಬಿರುಕು ಬಿಟ್ಟಿದೆ ಎಂಬ ವಿವಾದ ದಳಪತಿಗಳು ಹಾಗೂ ಸುಮಲತಾ ಅಂಬರೀಶ್ ನಡುವೆ ವೈಯಕ್ತಿಕ ಆರೋಪ-ಪ್ರತ್ಯಾರೋಪಕ್ಕೆ ಬಂದು ನಿಂತಿದೆ.
ಇದರ ನಡುವೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಪ್ರತಿಕ್ರಿಯಿಸಿದ್ದು, ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡದ ಅಧಿಕಾರಿಗಳಿಗೆ ಇಂದೇ ನೋಟಿಸ್ ಜಾರಿಗೊಳಿಸಲು ಮಂಡ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡುತ್ತೇನೆ ಎಂದರು.
ನಾನು ಸುಮ್ಮನೆ ಕೂರಲ್ಲ, ಏನು ಮಾಡ್ತೀನೋ ನೋಡುತ್ತಿರಿ: ಸುಮಲತಾ ಚಾಲೆಂಜ್!
ಹಿಂದಿನ ಅಧಿಕಾರಿ ಅಕ್ರಮ ಗಣಿಗಾರಿಕೆಗೆ ಸಾಥ್ ನೀಡಿದ್ದರು. ಈಗಿರುವ ಅಧಿಕಾರಿಗಳೂ ಅದೇ ಹಾದಿ ಹಿಡಿದಿದ್ದರೆ ಅವರಿಗೆ ನೋಟಿಸ್ ನೀಡುತ್ತೇವೆ. ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆಗೆ ಸಚಿವರ ಜತೆ ಮಾತನಾಡುತ್ತೇನೆ. ಅಕ್ರಮ ಗಣಿಗಾರಿಕೆ ಪಟ್ಟಿ ಕೊಡಲು ತಿಂಗಳಿಂದ ಕೇಳುತ್ತಿದ್ದೇನೆ. ಈ ಅಕ್ರಮ ನಿಲ್ಲದೇ ಇದ್ದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾದಿಯಲ್ಲೇ ಹೋರಾಟ ನಡೆಸುತ್ತೇನೆ ಎಂದು ಹೇಳಿದ ದರು.
ಅಗತ್ಯ ಬಿದ್ದರೆ ಅಕ್ರಮ ಗಣಿಗಾರಿಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸುತ್ತೇನೆ. ಅಕ್ರಮ ಗಣಿಗಾರಿಕೆಗೆ ಅಧಿಕಾರಿಗಳೇ ಕಾರಣ. ಅಧಿಕಾರಿಗಳ ಸಹಕಾರ ಇಲ್ಲದೆ ಅಕ್ರಮ ಗಣಿಗಾರಿಕೆ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಗಣಿಗಾರಿಕೆ ಬೇಕು, ಎಲ್ಲಾ ಕಡೆ ರಾಯಲ್ಟಿ ನೂರಾರು ಕೋಟಿ ಲೆಕ್ಕದಲ್ಲಿ ದೊರೆತರೆ ನಮ್ಮಲ್ಲಿ ಒಂದೆರಡು ಕೋಟಿ ಲೆಕ್ಕದಲ್ಲಿದೆ. ಅಕ್ರಮ ಗಣಿಗಾರಿಕೆ ಬಗೆಗೆ ಪಟ್ಟಿಕೊಡಿ ಎಂದು ನಾನು ಒಂದು ತಿಂಗಳಿನಿಂದ ಕೇಳುತ್ತಿದ್ದೇನೆ ಕೊಟ್ಟಿಲ್ಲ. ಅಕ್ರಮ ಗಣಿಗಾರಿಕೆ ನಿಲ್ಲದೆ ಇದ್ರೆ ನಾನು ಸುಮಲತಾರ ಹಾದಿಯಲ್ಲೇ ಹೋರಾಟ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.