
ಕಲಬುರಗಿ(ಜೂ.26): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಪರ್ಸಿಎಂ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಎಂಎಲ್ಸಿ ಸಿಟಿ ರವಿ ಪ್ರಿಯಾಂಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಇಲಾಖೆಯ ಅನೇಕ ಸಮಸ್ಯೆಗಳಿಗೆ ಪರಿಹಾರ ಕಾಣದೆ ನೆನೆಗುದಿಗೆ ಬಿದ್ರೂ ಕೂಡಾ ಅವನ್ನೆಲ್ಲ ನಿರ್ಲಕ್ಷ ತೋರುತ್ತ ಅನ್ಯರ ಇಲಾಖೆಗಳಲ್ಲೇ ಪ್ರಿಯಾಂಕ್ ಖರ್ಗೆ ಮೂಗು ತೂರಿಸುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ರಾಜ್ಯಕ್ಕೆ ವರವಾಗುವ ಬದಲು ಶಾಪವಾಗಿದೆ: ಸಿದ್ದು ಸರ್ಕಾರದ ವಿರುದ್ಧ ಹರಿಹಾಯ್ದ ಸಿ.ಟಿ.ರವಿ
ಎಲ್ಲಾ ಖಾತೆಯ ಪವರ್ಆಫ್ ಅಟಾರ್ನಿ (ಜಿಪಿಎ) ಪ್ರಿಯಾಂಕ್ ಖರ್ಗೆ ತಗೊಂಡಿದ್ದಾರೆ. ಯಾರೂ ಈ ಅಧಿಕಾರ ಕೊಟ್ಟಿಲ್ಲ ಅವರೇ ಸ್ವತಃ ತಗೊಂಡಿದ್ದು. ಸಿಎಂ ಖಾತೆಯಿಂದ ಹಿಡಿದು ಎಲ್ಲಾ ಖಾತೆಗಳಲ್ಲೂ ಖರ್ಗೆ ಕೈ ಆಡಿಸುತ್ತಾರೆ. ಆದರೆ ತಮ್ಮ ಖಾತೆಯ ಸಮಸ್ಯೆ ಬಗ್ಗೆ ಮಾತ್ರ ಡೋಂಟ್ ಕೇರ್' ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.