ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ನಾನೆಲ್ಲಿ ಹೇಳಿದ್ದೇನೆ: ಸಚಿವ ಪ್ರಿಯಾಂಕ್‌ ಖರ್ಗೆ

Published : Oct 14, 2025, 05:26 AM IST
Priyank Kharge

ಸಾರಾಂಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿಸಬೇಕು ಎಂದು ನಾನೆಲ್ಲಿ ಹೇಳಿದ್ದೇನೆ. ಸರ್ಕಾರಿ ಸ್ಥಳಗಳಲ್ಲಿ ಸಂಘ ಪರಿವಾರದವರ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದಷ್ಟೇ ನನ್ನ ಆಗ್ರಹ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು (ಅ.14): ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನಿಷೇಧಿಸಬೇಕು ಎಂದು ನಾನೆಲ್ಲಿ ಹೇಳಿದ್ದೇನೆ. ಸರ್ಕಾರಿ ಸ್ಥಳಗಳಲ್ಲಿ ಸಂಘ ಪರಿವಾರದವರ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದಷ್ಟೇ ನನ್ನ ಆಗ್ರಹ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಆರೆಸ್ಸೆಸ್‌ ನಿಷೇಧಿಸಬೇಕು ಎಂದು ಹೇಳಿಲ್ಲ. ನಿಯಮಾವಳಿ ಪ್ರಕಾರ ಅದು ನೋಂದಣಿಯಾಗದ ಸಂಸ್ಥೆ. ಪೊಲೀಸರ ಅನುಮತಿ ಪಡೆಯದೆ ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮೈದಾನ, ಸಾರ್ವಜನಿಕ ಮೈದಾನ, ಉದ್ಯಾನ ಮತ್ತಿತರ ಸ್ಥಳಗಳಲ್ಲಿ ಶಾಖೆ, ಬೈಠಕ್‌ಗಳನ್ನು ನಡೆಸುತ್ತಾರೆ. ಅದನ್ನು ನಿಷೇಧಿಸಬೇಕು. ಬೇಕಿದ್ದರೆ ಅವರು ಖಾಸಗಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಿಕೊಳ್ಳಲಿ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ನೆಹರು, ಇಂದಿರಾ ಗಾಂಧಿ ಅವರಿಂದಲೇ ಆರೆಸ್ಸೆಸ್‌ ಬ್ಯಾನ್‌ ಮಾಡಲಾಗಿಲ್ಲ ಎಂದು ಬಿಜೆಪಿ ನಾಯಕರು ಹೇಳಿದ್ದಾರಲ್ವಾ ಎಂಬ ಪ್ರಶ್ನೆಗೆ, ಸರ್ದಾರ್ ವಲ್ಲಬಬಾಯಿ ಪಟೇಲ್ ಅವರು ಹಿಂದೆ ಆರೆಸ್ಸೆಸ್‌ ಬ್ಯಾನ್ ಮಾಡಿದ್ದರು. ಹೇಡಿಗಳು ನಂತರ ಪಟೇಲರ ಕಾಲಿಗೆ ಬಿದ್ದು, ನಾವು ಕೇಂದ್ರ ಸರ್ಕಾರದ ನಿಯಮಗಳನ್ನು ಪಾಲಿಸುತ್ತೇವೆ. ನಮ್ಮ ನಿಯತ್ತು ರಾಷ್ಟ್ರಧ್ವಜಕ್ಕೆ ಎಂದು ಕ್ಷಮೆ ಕೋರಿದ್ದಕ್ಕೆ ನಿಷೇಧ ತೆರವು ಮಾಡಲಾಗಿತ್ತು. ಪಟೇಲರು ಆರೆಸ್ಸೆಸ್‌ ತತ್ವ ಎಷ್ಟು ವಿಷಕಾರಿಯಾಗಿದೆ ಎಂದು ನೆಹರು ಅವರಿಗೆ ಪತ್ರವನ್ನೂ ಬರೆದಿದ್ದಾರೆ. ಆರೆಸ್ಸೆಸ್‌ನವರು ಇತಿಹಾಸ ಓದಲಿ ಎಂದು ತಿರುಗೇಟು ನೀಡಿದರು.

ಒಂದು ನಿಯಮ ಯಾಕೆ?

ಆರೆಸ್ಸೆಸ್‌ನವರಂತೆ ದಲಿತರ ಸಂಘಟನೆ, ಬೇರೆ ಸಂಘಟನೆಯವರು ದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ಪುತ್ತಾರಾ? ಅವರ ಮಕ್ಕಳಿಗೆ ಒಂದು ನಿಯಮ, ಬಡವರ ಮಕ್ಕಳಿಗೆ ಒಂದು ನಿಯಮ ಯಾಕೆ? ಪ್ರಹ್ಲಾದ್‌ ಜೋಶಿ, ಆರ್‌.ಅಶೋಕ್, ಠಾಕೂರ್‌ ದೆಹಲಿ ಕ್ಯಾಬಿನೆಟ್‌ ಸಚಿವರ ಮಕ್ಕಳು ಏನ್ ಮಾಡ್ತಿದ್ದಾರೆ ಒಮ್ಮೆ ನೋಡಿ. ಇವರ ಮಕ್ಕಳೆಲ್ಲ ಯಾಕೆ ಗಣವೇಷ ಹಾಕಿಕೊಳ್ಳುತ್ತಿಲ್ಲ. ಇವರ ಮಕ್ಕಳೆಲ್ಲ ಯಾಕೆ ಗೋಮೂತ್ರ ಕುಡಿಯುತ್ತಿಲ್ಲ. ಇವರ ಮಕ್ಕಳೆಲ್ಲ ಯಾಕೆ ಗಂಗಾ ನದಿಯಲ್ಲಿ ಮುಳುಗುತ್ತಿಲ್ಲ ಎಂದು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!