
ಕಲಬುರಗಿ(ಆ.27): ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಅಭಿನಂದಿಸಲು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಬಿಜೆಪಿ ಮುಖಂಡರು ಬ್ಯಾರಿಕೇಡ್ ಹಿಂದೆಯೇ ನಿಂತು ಗಮನ ಸೆಳೆಯಲು ಯತ್ನಿಸಿದ ವಿದ್ಯಮಾನ ಬಿಜೆಪಿಗರು ಸರ್ವಾಧಿಕಾರದ ಸಂತ್ರಸ್ತರಾಗಿರುವುದನ್ನು ಸಾಬೀತುಪಡಿಸುವಂತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಕಟೀಲ್, ಅಶೋಕ್, ಮುನಿರತ್ನ ಮತ್ತಿತರ ರಾಜ್ಯ ಬಿಜೆಪಿ ಮುಖಂಡರು ರಸ್ತೆಬದಿ ಅಳವಡಿಸಿದ್ದ ಬ್ಯಾರಿಕೇಡ್ ಹಿಂದೆ ನಿಂತಿರುವ ಚಿತ್ರಗಳನ್ನು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್, ಪ್ರಧಾನಿ ಗಮನ ಸೆಳೆಯಲು ಹೀಗೆ ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವ ಬೀದಿಪಾಲು ಮಾಡಿಕೊಂಡಿರುವುದು ಕರುಣಾಜನಕವಾಗಿದೆ ಎಂದು ಹೇಳಿದ್ದಾರೆ.
ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೆ ಮುಂದಾಗಿ: ಸಚಿವ ಪ್ರಿಯಾಂಕ್ ಖರ್ಗೆ
ಇವರೆಲ್ಲಾ ‘ಬ್ಯಾರಿಕೇಡ್ ಬಂಧಿಗಳು’. ರಾಜ್ಯ ಬಿಜೆಪಿ ಮುಖಂಡರನ್ನು ಇಷ್ಟೊಂದು ತಿರಸ್ಕಾರಕ್ಕೆ ಒಳಪಡಿಸಿರುವಾಗ ಇನ್ನು ವಿರೋಧ ಪಕ್ಷದ ನಾಯಕರ ಆಯ್ಕೆ ಸಾಧ್ಯವಾಗುವುದೇ? ಎಂದೂ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.