ಅಮೆರಿಕ ಭೇಟಿಗೆ ಅನುಮತಿ ನಿರಾಕರಣೆ: ಜೈಶಂಕರ್‌ಗೆ ಪ್ರಿಯಾಂಕ್‌ ಖರ್ಗೆ ಪತ್ರ

Kannadaprabha News   | Kannada Prabha
Published : Jun 21, 2025, 06:19 AM IST
Priyank kharge

ಸಾರಾಂಶ

ಯಾವುದೇ ವಿವರಣೆಯಿಲ್ಲದೆ ಒಬ್ಬ ಸಚಿವರಿಗೆ ಅಧಿಕೃತ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯ ನಿರಾಕರಿಸುವುದು ಗಂಭೀರ ಕಳವಳ ಹುಟ್ಟುಹಾಕುತ್ತದೆ. ಇದು ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.

ಬೆಂಗಳೂರು (ಜೂ.21): ಐಟಿ-ಬಿಟಿ ಸಚಿವನಾಗಿ ನಾನು ಕೈಗೊಂಡಿದ್ದ ಅಧಿಕೃತ ಅಮೆರಿಕ ಭೇಟಿಗೆ ರಾಜಕೀಯ ಅನುಮತಿ ನಿರಾಕರಿಸಿರುವುದಕ್ಕೆ ಸ್ಪಷ್ಟನೆ ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ಪತ್ರ ಬರೆದಿದ್ದೇನೆ. ಆದಷ್ಟು ಬೇಗ ಲಿಖಿತ ಸ್ಪಷ್ಟೀಕರಣ ನೀಡುತ್ತಾರೆಂದು ಆಶಿಸಿದ್ದೇನೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ವಿವರಣೆಯಿಲ್ಲದೆ ಒಬ್ಬ ಸಚಿವರಿಗೆ ಅಧಿಕೃತ ಜವಾಬ್ದಾರಿಗಳನ್ನು ನಿರ್ವಹಿಸುವ ಸಾಮರ್ಥ್ಯ ನಿರಾಕರಿಸುವುದು ಗಂಭೀರ ಕಳವಳ ಹುಟ್ಟುಹಾಕುತ್ತದೆ. ಇದು ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಸಂಪುಟ ಸಚಿವ ಹಾಗೂ ವಿಶ್ವದ ಅತಿದೊಡ್ಡ ತಂತ್ರಜ್ಞಾನ ಶಕ್ತಿಯಾಗಿರುವ ಕರ್ನಾಟಕದ ಐಟಿ-ಬಿಟಿ ಸಚಿವರಿಗೆ ಅನುಮತಿ ನಿರಾಕರಿಸಿದೆ. ಮಾತ್ರವಲ್ಲದೆ, ಸಹಕಾರಿ ಒಕ್ಕೂಟ ವ್ಯವಸ್ಥೆಯ ಚೈತನ್ಯವನ್ನೂ ಕಡೆಗಣಿಸುತ್ತದೆ. ಹೀಗಾಗಿ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

ಪತ್ರದಲ್ಲೇನಿದೆ?: ಜೂ.14 ರಿಂದ 27ರವರೆಗೆ ಯುಎಸ್‌ ಭೇಟಿಗೆ ಅಧಿಕೃತ ಕಾರ್ಯಕ್ರಮ ನಿಗದಿಯಾಗಿತ್ತು. ಬೋಸ್ಟನ್‌ಲ್ಲಿ ಬಯೋ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಹಾಗೂ ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿ ಸಮಾವೇಶವೊಂದರಲ್ಲಿ ಭಾಗವಹಿಸಬೇಕಾಗಿತ್ತು. ಜತೆಗೆ ಪ್ರಮುಖ ಕಂಪೆನಿಗಳು, ವಿಶ್ವವಿದ್ಯಾಲಯ, ಸಂಸ್ಥೆಗಳೊಂದಿಗೆ ಸಭೆ ನಡೆಸುವ ಉದ್ದೇಶವಿತ್ತು. ಸಹಯೋಗ ಬಲಪಡಿಸುವ ಜತೆಗೆ ಬಂಡವಾಳ ಹೂಡಿಕೆ, ಉದ್ಯೋಗವಕಾಶ ಸೃಷ್ಟಿ ಒಡಂಬಡಿಕೆಗಳ ಬಗ್ಗೆ ಚರ್ಚಿಸಬೇಕಾಗಿತ್ತು. ಕರ್ನಾಟಕವು ತಂತ್ರಜ್ಞಾನದ ರಾಜಧಾನಿ.

ದೇಶಕ್ಕೆ ಮಾತ್ರವಲ್ಲ ಏಷ್ಯಾ ಪೆಸಿಫಿಕ್ ಪ್ರಾಂತ್ಯದ ಅಭಿವೃದ್ಧಿ ಎಂಜಿನ್. ಸ್ಟಾರ್ಟಪ್ ಹಾಗೂ ಆವಿಷ್ಕಾರಗಳಲ್ಲಿ ಜಾಗತಿಕ ನಾಯಕನ ಸಾಲಿನಲ್ಲಿ ನಿಂತಿರುವ ರಾಜ್ಯ ನಮ್ಮದು. ಇಂತಹ ರಾಜ್ಯದ ಐಟಿ-ಬಿಟಿ ಸಚಿವರಿಗೆ ರಾಜಕೀಯ ಅನುಮತಿ ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕಾರಣ ತಿಳಿಸದಿರುವುದು ಸರಿಯಲ್ಲ. ವಿನಾಕಾರಣ ಅನುಮತಿ ನಿರಾಕರಣೆ ನಮ್ಮ ಮುಂದಿನ ಕಾರ್ಯಕ್ರಮಗಳ ಯೋಜನೆಗಳಿಗೂ ತೊಂದರೆ ಉಂಟು ಮಾಡುತ್ತದೆ ಎಂದು ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂಗನವಾಡಿ, ಆಶಾ ನೌಕರರ ಗೌರವಧನ ಹೆಚ್ಚಿಸಿ: ಸಂಸದ ಡಾ.ಕೆ.ಸುಧಾಕರ್‌ ಮನವಿ
ಬಂಗಾರಪ್ಪ ಅವರ ಹೆಸರಿಗೆ ತಕ್ಕ ರೀತಿ ಮಧು ಮಾತನಾಡಲಿ: ಆರಗ ಜ್ಞಾನೇಂದ್ರ ತಿರುಗೇಟು