ಬಿಜೆಪಿ ಜೊತೆ ಜೆಡಿಎಸ್‌ ಒಪ್ಪಂದ: ಸಿದ್ದರಾಮಯ್ಯಗೆ ಸಚಿವ ಅಶೋಕ್ ಟಾಂಗ್‌

Suvarna News   | Asianet News
Published : Nov 28, 2020, 02:13 PM IST
ಬಿಜೆಪಿ ಜೊತೆ ಜೆಡಿಎಸ್‌ ಒಪ್ಪಂದ: ಸಿದ್ದರಾಮಯ್ಯಗೆ ಸಚಿವ ಅಶೋಕ್ ಟಾಂಗ್‌

ಸಾರಾಂಶ

ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷ| ಯಾರ ಜೊತೆ ಹೋಗಬೇಕು ಎಂಬ ತೀರ್ಮಾನ ಕೈಗೊಳ್ಳಲು ಅವರು ಸ್ವತಂತ್ರರು| ಈ ಬಗ್ಗೆ ಬ್ರಹ್ಮನಿಗೂ ಗೊತ್ತಿಲ್ಲ| ಸಿದ್ದರಾಮಯ್ಯಗೆ ಸಚಿವ ಆರ್. ಅಶೋಕ್ ಟಾಂಗ್‌| 

ಹಾಸನ(ನ.28): ಸಿಎಂ ಬದಲಾವಣೆ ಪ್ರಶ್ನೆ ಉದ್ಭವವಾಗಿಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾರೆ, ಅದೇ ಸ್ಥಾನದಲ್ಲಿ ಅವರು ಮುಂದುವರೆಯುತ್ತಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. 

ಶಿರಾ, ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಒಪ್ಪಂದ ಮಾಡಿಕೊಂಡಿತ್ತು ಎಂಬ ಸಿದ್ದರಾಮಯ್ಯ ಆರೋಪದ ಬಗ್ಗೆ ಇಂದು(ಶನಿವಾರ) ಜಿಲ್ಲೆಯ ಚನ್ನರಾಯಪಟ್ಟಣ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಸ್ವತಂತ್ರ ಪ್ರಾದೇಶಿಕ ಪಕ್ಷವಾಗಿದೆ. ಯಾರ ಜೊತೆ ಹೋಗಬೇಕು ಎಂಬ ತೀರ್ಮಾನ ಕೈಗೊಳ್ಳಲು ಅವರು ಸ್ವತಂತ್ರರಾಗಿದ್ದಾರೆ. ಈ ಬಗ್ಗೆ ಬ್ರಹ್ಮನಿಗೂ ಗೊತ್ತಿಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯಗೆ ಟಾಂಗ್‌ ಕೊಟ್ಟಿದ್ದಾರೆ. 

ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ

ಹೇಮಾವತಿ ಪುನರ್ವಸತಿ ‌ಸಂತ್ರಸ್ತರಿಗೆ ಭೂಮಿ ಹಂಚಿಕೆಯ ಭ್ರಷ್ಟಾಚಾರ ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ನಾನೇ ಕ್ರಮ ಜರುಗಿಸುವೆ. ಯಾವುದೇ ಅಧಿಕಾರಿ ತಪ್ಪು ಮಾಡಿದ್ದರೂ ಅವರ ವಿರುದ್ಧ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!