ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಬೆಳವಣಿಗೆಗಳು ನಿಜ ಎಂದ ಸಚಿವ

Published : May 26, 2021, 04:19 PM ISTUpdated : May 26, 2021, 04:24 PM IST
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಬೆಳವಣಿಗೆಗಳು ನಿಜ ಎಂದ ಸಚಿವ

ಸಾರಾಂಶ

* ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಮತ್ತೆ  ಮುನ್ನೆಲೆ   * ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಬದಲಿಸಲು ನಡೆಯುತ್ತಿರುವ ಬೆಳವಣಿಗೆಗಳು ನಿಜ * ಈ ಬಗ್ಗೆ ಖಚಿತಪಡಿಸಿದ  ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, (ಮೇ.26):  ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್‌ ಜೊತೆ ಮಾತುಕತೆ ನಡೆಸಿದ್ದಾರೆ.

ನಾಯಕತ್ವ ಬದಲಾವಣೆ: ಗರಿಗದೆರಿದ ರಾಜಕೀಯ!

ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ನಿಜವಾಗಿದೆ.
 
ಇಂದು (ಬುಧವಾರ) ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚಟುವಟಿಕೆಗಳು ನಡೆದಿರುವುದು ನಿಜ. ಶೇ.100 ರಷ್ಟು ನಿಜ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಚಿವರು ಕೂಡ ಭಾಗಿ ಆಗಿರೋದು ನಿಜ. ದೆಹಲಿಯಲ್ಲಿ ಶಾಸಕರು, ಸಚಿವರು ಇರೋದು ನಿಜ ಎಂದು ಸ್ಪಷ್ಟಪಡಿಸಿದರು.

ಹಲವಾರು ಸಭೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಪ್ರತ್ಯೇಕ ಸಭೆಗಳು ನಡೆಸುತ್ತಿರೋದು ಕೂಡಾ ಗಮನಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ದೆಹಲಿಗೂ ಕೆಲವು ನಾಯಕರು ಹೋಗಿದ್ದಾರೆ. ಈ ಬೆಳವಣಿಗೆಗಳನ್ನು ನಾನು ಪಕ್ಕಕ್ಕಿಟ್ಟಿದ್ದೇನೆ. ನನ್ನ ಆದ್ಯತೆ ಎನಿದ್ದರೂ ಕೊರೋನಾ ನಿಯಂತ್ರಣ, ಆಕ್ಸಿಜನ್, ಬೆಡ್ ಕೊಡಿಸೋದು. ಕೊರೋನಾ ಹತೋಟಿಗೆ ತರುವ ಕೆಲಸ ಮಾಡ್ತಿದ್ದೇವೆ. ಕೊರೋನಾ ವಿರುದ್ಧದ ಹೋರಾಟ ನನಗೆ ಮುಖ್ಯವಾಗಿದೆ. ನನ್ನ ಗಮನ ಅತ್ತ ಕಡೆ ಅಷ್ಟೇ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರ ಕರ್ನಾಟಕಕ್ಕೆ ಕೊಟ್ಟ ಭರವಸೆ ಈಡೇರಿಕೆ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌.ಅಶೋಕ್‌
ಧರ್ಮಸ್ಥಳ ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌: ಬಿಜೆಪಿ ನಾಯಕರ ತೀವ್ರ ಆರೋಪ