
ಕಾರವಾರ (ಜ.25): ಬಿಜೆಪಿಯ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಗುಮಾನಿ ಹಬ್ಬಿದ್ದು ಈ ಸಂಬಂಧ ಆನಂದ್ ಸಿಂಗ್ ಜತೆ ಅಶೋಕ್ ಫೋನ್ ಕಾಲ್ ಮಾಡುವ ಮೂಲಕ ಗರಂ ಆಗಿದ್ದಾರೆ ಎನ್ನಲಾಗಿದೆ.
ಸಚಿವ ಆರ್. ಅಶೋಕ್ ಕರೆ ಮಾಡಿ ಆನಂದ್ ಸಿಂಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ನಿಮಗೇನು ಮಾಡಲು ಕೆಲಸ ಇಲ್ಲವೇ. ಇಂತಹ ನಿರ್ಧಾರ ತೆಗೆದುಕೊಂಡಿದ್ದೀರಿ ಎಂದು ಅಶೋಕ್ ಫೋನ್ ನಲ್ಲಿ ಅಸಮಾಧಾನ ಹೊರಹಾಕಿದ್ದಾರೆನ್ನಲಾಗಿದೆ.
ಖಾತೆ ಮರುಹಂಚಿಕೆ ಬೆನ್ನಲ್ಲೇ ಅಸಮಾಧಾನ ಸ್ಪೋಟ: ಆನಂದ್ ಸಿಂಗ್ ರಾಜೀನಾಮೆ? .
ಸಮಸ್ಯೆಗಳನ್ನು ಬಗೆಹರಿಸಿ ಎಲ್ಲವನ್ನೂ ಸರಿಮಾಡೋಣ. ಆದರೆ ರಾಜೀನಾಮೆ ನೀಡುವುದು ಬೇಡ ಎಂದು ಸಮಾಧಾನ ಪಡಿಸಿದ್ದಾ ಎನ್ನಲಾಗಿದೆ.
ಈ ಹಿಂದೆ ಕಾಂಗ್ರೆಸ್ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದ ಆನಂದ್ ಸಿಂಗ್ ಮತ್ತೊಮ್ಮೆ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿಯಾಗಿದ್ದು, ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ ಎಂದು ಎಚ್ಚರಿಸಿದ್ದಾರೆ.
ಭಟ್ಕಳದ ಐಬಿಯಲ್ಲಿ ಅಶೋಕ್ ಆನಂದ್ ಸಿಂಗ್ಗೆ ಕರೆ ಮಾಡಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆನ್ನಲಾಗಿದೆ.
ಖಾತೆ ಬದಲಾವಣೆ ಮಾಡಿದ ಹಿನ್ನೆಲೆ ಆನಂದ್ ಸಿಂಗ್ ಅಸಮಾಧಾನ ಹೊರ ಹಾಕಿದ್ದಾರೆ. ಪರಿಸರ ಖಾತೆ ಬದಲಾವಣೆ ಮಾಡಿ ತಮ್ಮ ಬಳಿ ಇದ್ದ ಮೂಲ ಸೌಕರ್ಯ ಖಾತೆ ಹಾಗೂ ಮಾಧುಸ್ವಾಮಿ ಬಳಿ ಇದ್ದ ಹಜ್ ಖಾತೆ ನೀಡಿದ್ದು, ಪರಿಸರ ಖಾತೆ ಮಾಧುಸ್ವಾಮಿಗೆ ನೀಡಲಾಗಿದೆ. ಈ ಸಂಬಂಧ ರಾಜೀನಾಮೆ ನೀಡುವುದಾಗಿ ಆನಂದ್ ಸಿಂಗ್ ಸಿಎಂ ಬಳಿ ಹೇಳಿಕೊಂಡಿದ್ದರೆನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.