ಗೋಹತ್ಯೆ ನಿಷೇಧಿಸಿ ಕಾಂಗ್ರೆಸ್‌ ವಿರುದ್ಧ ಸೇಡು ತೀರಿಸಿಕೊಂಡ್ವಿ: ಅಶೋಕ್‌

Kannadaprabha News   | Asianet News
Published : Dec 11, 2020, 01:13 PM IST
ಗೋಹತ್ಯೆ ನಿಷೇಧಿಸಿ ಕಾಂಗ್ರೆಸ್‌ ವಿರುದ್ಧ ಸೇಡು ತೀರಿಸಿಕೊಂಡ್ವಿ: ಅಶೋಕ್‌

ಸಾರಾಂಶ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು| ಹೊಸದಾಗಿ ನಾವು ಹೇಳಿಲ್ಲ. ಹೀಗಾಗಿ ಕಾಯ್ದೆ ಅಂಗೀಕಾರ ಮಾಡಿದ್ದೇವೆ| ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಮಾಡಿದ್ದ ಅಪಮಾನದ ಸೇಡನ್ನು ನಾವು ಈಗ ತೀರಿಸಿದ್ದೇವೆ: ಅಶೋಕ್‌| 

ಬೆಂಗಳೂರು(ಡಿ.11): ಈ ಹಿಂದೆ ಬಿಜೆಪಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾದಾಗ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ಮೂಲಕ ಕಾಯ್ದೆಗೆ ತಡೆ ತಂದು ಮಾಡಿದ ಅವಮಾನಕ್ಕೆ ಇಂದು ಸೇಡು ತೀರಿಸಿದ್ದೇವೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದಾರೆ. 

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಹೊಸದಾಗಿ ನಾವು ಹೇಳಿಲ್ಲ. ಹೀಗಾಗಿ ಕಾಯ್ದೆ ಅಂಗೀಕಾರ ಮಾಡಿದ್ದೇವೆ ಎಂದರು.

'ದಿಕ್ಕು ದೆಸೆ ಇಲ್ಲದಂಗಾಗಿದೆ ಕಾಂಗ್ರೆಸ್; ಇನ್ನೊಂದೆರಡು ವರ್ಷಗಳಲ್ಲಿ ದೇಶದಿಂದಲೇ ಔಟ್.'!

ಕಾಂಗ್ರೆಸ್‌ ನಾಯಕರು ಈ ಹಿಂದೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ತಡೆ ಹಿಡಿದಿದ್ದು ಯಾಕೆ ಎಂದು ಪ್ರಶ್ನಿಸಿದ ಸಚಿವ ಆರ್‌. ಅಶೋಕ್‌, ಕಾಂಗ್ರೆಸ್‌ ಮುಖಂಡರು ಬಿಜೆಪಿಗೆ ಮಾಡಿದ್ದ ಅಪಮಾನದ ಸೇಡನ್ನು ನಾವು ಈಗ ತೀರಿಸಿದ್ದೇವೆ. ಪರಿಷತ್‌ನಲ್ಲಿ ಕೂಡ ಗೋಹತ್ಯೆ ಮಸೂದೆಯನ್ನು ನಾವು ಪಾಸ್‌ ಮಾಡಿಸುತ್ತೇವೆ ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀವು ಕರಾವಳಿಯವರು ಬೆಂಕಿ ಹಚ್ಚೋರು'- ಸಚಿವ ಬೈರತಿ ಸುರೇಶ್; ಶಾಸಕ ಸುನೀಲ್ ಕುಮಾರ್ ಆಕ್ರೋಶ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ