RR ನಗರ : ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರಾ ಡಿಕೆಶಿ?

Kannadaprabha News   | Asianet News
Published : Nov 10, 2020, 07:12 AM IST
RR ನಗರ :  ಫಲಿತಾಂಶಕ್ಕೂ ಮೊದಲೇ ಸೋಲೊಪ್ಪಿಕೊಂಡರಾ ಡಿಕೆಶಿ?

ಸಾರಾಂಶ

ಆರ್‌ ಆರ್‌ ನಗರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗುವ ಮುನ್ನವೇ ಡಿಕೆಶಿ ಸೋಲೊಪ್ಪಿಕೊಂಡರಾ...? 

ಬೆಂಗಳೂರು (ನ.10):  ಆರ್‌.ಆರ್‌.ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸೋಲಿಗೆ ಮೊದಲೇ ಶಸ್ತ್ರ ತ್ಯಾಗ ಮಾಡಿ ಹೋಗಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಟಾಂಗ್‌ ಕೊಟ್ಟಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಂಗಳವಾರ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಎರಡೂ ಕ್ಷೇತ್ರದಲ್ಲಿ ಮೂರು ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ. ಆರ್‌.ಆರ್‌.ನಗರ ಕ್ಷೇತ್ರದ ಉಸ್ತುವಾರಿ ನನಗೆ ನೀಡಿದ್ದು, ಸುಮಾರು 25 ವರ್ಷ ಆ ಕ್ಷೇತ್ರದಲ್ಲಿ ಕಾರ್ಯಕರ್ತ, ಶಾಸಕ, ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. ಉಪಚುನಾವಣೆಯಲ್ಲಿ ದುಡಿಮೆ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಟ ನಡೆಯುವುದಿಲ್ಲ. ಅವರು ಸೋಲಿಗೆ ಮೊದಲ ಶಸ್ತ್ರತ್ಯಾಗ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ಅಶೋಕ್ ಸಾವಿನ ಬಗ್ಗೆ ಅನುಮಾನ, ನ್ಯಾಯಾಂಗ ತನಿಖೆಗೆ ಡಿಕೆಶಿ ಆಗ್ರಹ ...

ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್‌ ಆಟಕ್ಕಿಂತ ಬಿಜೆಪಿ ಆಟ ನಡೆಯಲಿದೆ. ಬಿಜೆಪಿ ಅಭ್ಯರ್ಥಿ 25-30 ಸಾವಿರ ಅಂತರದಲ್ಲಿ ಗೆಲ್ಲುತ್ತೇವೆ. ಡಿ.ಕೆ.ಶಿವಕುಮಾರ್‌ ಅವರು ನನ್ನ ಹೇಳಿಕೆಗಳಿಗೆ ಉತ್ತರವನ್ನೇ ಕೊಟ್ಟಿಲ್ಲ. ಮಾತೆತ್ತಿದರೆ ಅಶೋಕಣ್ಣ ದೊಡ್ಡವರು, ಮುನಿರತ್ನ ನನ್ನ ಸರಿ ಸಮಾನ ಅಲ್ಲ ಎಂಬ ಮಾತುಗಳನ್ನಾಡಿದ್ದಾರೆ. ಅವರು ಯಾವುದೇ ಕೆಲಸವನ್ನು ಕ್ಷೇತ್ರದಲ್ಲಿ ಮಾಡಿಲ್ಲ. ಶಿವಕುಮಾರ್‌ ಅವರು ನಾನೇ ಇಲ್ಲಿ ಅಭ್ಯರ್ಥಿ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಓಡಾಡಿದ್ದರು. ಈ ಹಿನ್ನೆಲೆಯಲ್ಲಿ ನಾನು ಸಹ ನಾನೇ ಅಭ್ಯರ್ಥಿ ಎಂದು ಪ್ರಚಾರ ಮಾಡಿದ್ದೇನೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್