ಪಾಪ ಕಳೆದುಕೊಳ್ಳಲು ಕಾವೇರಿ ನದೀಲಿ ಮುಳುಗೇಳಲಿ: ಬಿಜೆಪಿ-ಜೆಡಿಎಸ್‌ ವಿರುದ್ಧ ಹರಿಹಾಯ್ದ ರಾಮಲಿಂಗಾರೆಡ್ಡಿ

Published : Aug 05, 2024, 12:03 PM IST
 ಪಾಪ ಕಳೆದುಕೊಳ್ಳಲು ಕಾವೇರಿ ನದೀಲಿ ಮುಳುಗೇಳಲಿ: ಬಿಜೆಪಿ-ಜೆಡಿಎಸ್‌ ವಿರುದ್ಧ ಹರಿಹಾಯ್ದ ರಾಮಲಿಂಗಾರೆಡ್ಡಿ

ಸಾರಾಂಶ

ಯಡಿಯೂರಪ್ಪನವರ ಆಪ್ತರ ಮನೆಯಲ್ಲಿ 750 ಕೋಟಿ ಹಣ ಸಿಕ್ಕಿತ್ತು. KIDBನಲ್ಲೂ ಹಗರಣಗಳ ಸರಮಾಲೆ ಇದೆ. ಈ ಹಗರಣಗಳ ತನಿಖೆಗೆ ಗವರ್ನರ್ ಇನ್ನೂ ಅನುಮತಿ ಕೊಟ್ಟಿಲ್ಲ. ಪಾದಯಾತ್ರೆ ವೇಳೆ ರಾಮನಗರಕ್ಕೆ ಬರುವ ನೀವು ಈ ಹಿಂದಿನ ಅವಧಿಯಲ್ಲಿಯೂ ನಡೆದಿರುವ ಹಗರಣಗಳ ಬಗ್ಗೆ ತನಿಖೆಯಾಗಲೆಂದು ಒತ್ತಾಯಿಸಬೇಕು ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ 

ರಾಮನಗರ(ಆ.04):  ಬಿಜೆಪಿ - ಜೆಡಿಎಸ್ ಮಾಡಿರುವ ಪಾಪಗಳನ್ನು ತೊಳೆದುಕೊಳ್ಳಲು ಪಾಪದಯಾತ್ರೆ ಮಾಡುತ್ತಿದ್ದಾರೆ. ಕಾವೇರಿ ನದಿ ಹರಿಯುತ್ತಿರುವ ಎಲ್ಲ ಕಡೆ ಮೈತ್ರಿ ನಾಯಕರು ಸ್ನಾನ ಮಾಡಿಕೊಂಡರೆ, ಅವರ ಪಾಪದ ಕೊಡ ಸ್ವಲ್ಪವಾದರೂ ಕಡಿಮೆಯಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದರು.

ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿ - ಜೆಡಿಎಸ್ ನವರದ್ದು ಪಾದಯಾತ್ರೆ ಅಲ್ಲ, ಪಾಪದಯಾತ್ರೆ ಎಂದು ಲೇವಡಿ ಮಾಡಿದ ಸಚಿವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿರುವ ಅಕ್ರಮಗಳು ಫಾಸ್ಟ್‌ಟ್ರ್ಯಾಕ್‌ನಲ್ಲಿ ತನಿಖೆಯಾದರೆ ಅವರಲ್ಲಿನ ಬಹುತೇಕರು ಜೈಲು ಸೇರುತ್ತಾರೆ. ಅವರ ಹಗರಣ ಪಟ್ಟಿ ನೀಡಲು ಬೇಕಾದಷ್ಟಿವೆ. ಹೀಗಿರುವಾಗ ಇತರರ ಮೇಲೆ ಆರೋಪ ಹೊರೆಸಿ, ಪಾದಯಾತ್ರೆ ನಡೆಸುತ್ತಿರುವ ಅವರನ್ನು ಜನ ನೋಡುತ್ತಿದ್ದಾರೆ. ಹಗರಣಗಳನ್ನು ಮಾಡಿದ ಅಧಿಕಾರಿಗಳು ಜೈಲಿನಲ್ಲಿದ್ದರೆ, ಹಗರಣದ ರೂವಾರಿಗಳು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ: ಸಚಿವ ಚಲುವರಾಯಸ್ವಾಮಿ

ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಪಡೆದಿದ್ದು ದೇಶಕ್ಕೇ ಗೊತ್ತಿದೆ. ಜೊತೆಗೆ ಭೋವಿ ನಿಗಮದಲ್ಲಿ 100 ಕೋಟಿ, ಎಪಿಎಂಸಿ ಹಗರಣ, ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣ, ಗಂಗಾ ಕಲ್ಯಾಣ ಯೋಜನೆಯಲ್ಲಿ 430 ಕೋಟಿ ಹಗರಣ, ಪ್ರವಾಸೋದ್ಯಮ, ಕಿಯೋನಿಕ್ಸ್‌ನಲ್ಲಿ 500 ಕೋಟಿ, ಕೋವಿಡ್ ನಲ್ಲಿ ಸಾವಿರಾರು ಕೋಟಿ, ಪಿಎಸ್ಸೈ ನೇಮಕಾತಿಯಲ್ಲಿ ಹಗರಣ, ಪರಶುರಾಮ ಥೀಮ್ ಪಾರ್ಕ್ ಹಗರಣ, ಬಿಟ್ ಕಾಯಿನ್ ಹಗರಣಗಳು ನಡೆದಿವೆ.
ಯಡಿಯೂರಪ್ಪನವರ ಆಪ್ತರ ಮನೆಯಲ್ಲಿ 750 ಕೋಟಿ ಹಣ ಸಿಕ್ಕಿತ್ತು. KIDBನಲ್ಲೂ ಹಗರಣಗಳ ಸರಮಾಲೆ ಇದೆ. ಈ ಹಗರಣಗಳ ತನಿಖೆಗೆ ಗವರ್ನರ್ ಇನ್ನೂ ಅನುಮತಿ ಕೊಟ್ಟಿಲ್ಲ. ಪಾದಯಾತ್ರೆ ವೇಳೆ ರಾಮನಗರಕ್ಕೆ ಬರುವ ನೀವು ಈ ಹಿಂದಿನ ಅವಧಿಯಲ್ಲಿಯೂ ನಡೆದಿರುವ ಹಗರಣಗಳ ಬಗ್ಗೆ ತನಿಖೆಯಾಗಲೆಂದು ಒತ್ತಾಯಿಸಬೇಕು ಎಂದರು.

ಮುಡಾ ವಿಚಾರದಲ್ಲಿ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳ ವರದಿ ನೋಡದೆ ಮುಖ್ಯಮಂತ್ರಿಗಳಿಗೆ ನೋಟಿಸ್ ಕೊಟ್ಟಿದ್ದಾರೆ. ಇಂತಹ ಗಂಭೀರ ವಿಚಾರವನ್ನು ರಾಜ್ಯಪಾಲರ ಕಚೇರಿ ನೋಡುವುದಿಲ್ಲ ಎಂದರೆ ಏನರ್ಥ. ಬಿಜೆಪಿಯವರು ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ