ಬಿಜೆಪಿ ಸರ್ಕಾರ ಇದ್ದಾಗ ಭಯೋತ್ಪಾದಕರ ಅಡ್ಡೆಯಾಗಿತ್ತು; ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ: ರಾಮಲಿಂಗಾರೆಡ್ಡಿ

Published : Mar 05, 2024, 02:45 PM IST
ಬಿಜೆಪಿ ಸರ್ಕಾರ ಇದ್ದಾಗ ಭಯೋತ್ಪಾದಕರ ಅಡ್ಡೆಯಾಗಿತ್ತು; ನಮ್ಮ ಸರ್ಕಾರ ಬಂದ ಮೇಲೆ ಕಡಿಮೆಯಾಗಿದೆ: ರಾಮಲಿಂಗಾರೆಡ್ಡಿ

ಸಾರಾಂಶ

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿದ್ದನ್ನ ನಾನು ಸಮರ್ಥಿಸುವುದಿಲ್ಲ. ಬಾಂಬ್ ಸ್ಫೋಟಿಸಿದವರ ವಿರುದ್ಧ ಕ್ರಮ ತಗೊಬೇಕು, ಜೈಲಿಗೆ ಹಾಕಿ ಎಲ್ಲ ರೀತಿಯ ಶಿಕ್ಷೆ ಆಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕಲ್ಬುರ್ಗಿ (ಮಾ.5): ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿದ್ದನ್ನ ನಾನು ಸಮರ್ಥಿಸುವುದಿಲ್ಲ. ಬಾಂಬ್ ಸ್ಫೋಟಿಸಿದವರ ವಿರುದ್ಧ ಕ್ರಮ ತಗೊಬೇಕು, ಜೈಲಿಗೆ ಹಾಕಿ ಎಲ್ಲ ರೀತಿಯ ಶಿಕ್ಷೆ ಆಗಬೇಕು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗ 6 ಕಡೆ ಸರಣಿ ಬಾಂಬ್ ಬ್ಲಾಸ್ಟ್ ಆಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂ ಬಳಿ, ಮಲ್ಲೇಶ್ವರಂ ನಲ್ಲಿ, ವಿಮಾನ ನಿಲ್ದಾಣದಲ್ಲಿ , ಮಂಗಳೂರಿನಲ್ಲಿ   ಬಿಜೆಪಿ ಸರಕಾರ ಇದ್ದಾಗ ಬ್ಲಾಸ್ಟ್ ಆಗಿದ್ದವು. ಬಿಜೆಪಿ ಸರ್ಕಾರದಲ್ಲಿ ಭಯೋತ್ಪಾದಕರ ಅಡ್ಡೆಯಾಗಿತ್ತು. ಬಿಜೆಪಿಗೆ ಕಂಪೇರ್ ಮಾಡಿದ್ರೆ ಬಾಂಬ್ ಬ್ಲಾಸ್ಟ್, ಕ್ರಿಮಿನಲ್ ಆಕ್ಟಿವಿಟಿ ನಮ್ಮ ಅವಧಿಯಲ್ಲಿ ಬಹಳ ಕಡಿಮೆ ಆಗಿದೆ. ಮುಂದೆ ಸಂಪೂರ್ಣ ನಿಯಂತ್ರಣ ಮಾಡ್ತೇವೆ. ಪೊಲೀಸರಿಗೆ ಏನು ಕೆಲಸ ಮಾಡಬೇಕು ಗೊತ್ತಿದೆ, ಬಿಜೆಪಿಯವರನ್ನೆಲ್ಲಾ  ಕೇಳಕೊಂಡು ಮಾಡಬೇಕಾ ? ಎಂದು ಪ್ರಶ್ನಿಸಿದರು.

FSL ವರದಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದಿದೆ: ಡಾ ಜಿ ಪರಮೇಶ್ವರ್

ನಮ್ಮ ಸರಕಾರ ಬಂದ ಮೇಲೆ ಒಂದೇ ಕಡೆ ಆಗಿದ್ದು ಅದನ್ನೂ ನಿಯಂತ್ರಣ ಮಾಡ್ತೇವೆ. ಅಲ್ಪಸಂಖ್ಯಾತರ ಓಲೈಕೆ ಎಲ್ಲಾ ಸುಳ್ಳು ದೇಶದಲ್ಲಿರುವ ಜನ ಎಲ್ಲಾ ಒಂದೇ ಅನ್ನೋರು ನಾವು ವೋಟಿಗಾಗಿ ಬಿಜೆಪಿಯವರು ಜನರನ್ನು ಡಿವೈಡ್ ಮಾಡ್ತಿದಾರೆ. ಬಿಜೆಪಿ ಥರ ನಮಗೆ ಸುಳ್ಳು ಹೇಳಲು ಬರಲ್ಲ. ನಾವು ಗಾಂಧಿ ಫಾಲೋವರ್ಸ್. ಅವರಿಗೆ ಸುಳ್ಳು ಹೇಳದಿದ್ರೆ ತಿಂದ ಅನ್ನ ಜೀರ್ಣ ಆಗಲ್ಲ. ಮಂಡ್ಯದಲ್ಲಿ ಎರಡು ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ ಅಂತ ಒಬ್ಬ ಘೋಷಣೆ ಕೂಗ್ತಾನೆ. ಆಗ ಇನ್ನೊಬ್ಬ ಆತನ ಬಾಯಿ ಮುಚ್ಚಿಸ್ತಾನೆ. ಆಗ ಬಿಜೆಪಿಯವರು ಏನು ಮಾಡ್ತಿದ್ರು? ಮಣ್ಣು ತಿಂತಿದ್ರಾ? ನಾವಾದ್ರೆ ತಕ್ಷಣವೇ ಅರೆಸ್ಟ್ ಮಾಡಿದ್ದೇವೆ. ಬಿಜೆಪಿಯವರು ಏನು ಮಾಡಿದ್ರು? ಎಂದು ತಿರುಗೇಟು ನೀಡಿದರು.

ಪಾಕ್ ಪರ ಘೋಷಣೆ ಕೂಗಿದ ಪ್ರಕರಣ: ತನಿಖೆ ನಡೆಸಲು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ : ಡಿಕೆ ಶಿವಕುಮಾರ

ವಿಧಾನಸೌಧದಲ್ಲಿ ಘೋಷಣೆ ಕೂಗಿದರೂ, ಕೆಲ ಸಚಿವರು ದೇಶದ್ರೋಹಿಗಳ ರಕ್ಷಣೆಗೆ ಮುಂದಾದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಘೋಷಣೆ ಕೂಗಿಲ್ಲ ಅಂತಾ ಯಾರು ಹೇಳಿದ್ರೋ ಅವರನ್ನೇ ಹೋಗಿ ಕೇಳಿ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿ.ಕೆ.ಶಿವಕುಮಾರ್ 30 ದಿನಗಳ ಮೌನ ತಪ್ಪಿಸ್ಸಿಗೆ ಒಲಿಯುತ್ತಾ ಪಟ್ಟಾಭಿಷೇಕ; ಜನವರಿ 9ಕ್ಕೆ ಮುಹೂರ್ತ!
ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಅಸಮಾಧಾನ!