
ಬೆಳಗಾವಿ : ಕಾಂಗ್ರೆಸ್ ನಾಯಕರೊಂದಿಗೆ ಹಲವು ಬಾರಿ ಮನಸ್ತಾಪ ವ್ಯಕ್ತಪಡಿಸಿದ್ದ ಸಚಿವ ರಮೇಶ್ ಜಾರಕಿಹೊಳೀಸಿ ಇದೀಗ ಬೆಳಗಾವಿಯಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅವರು ಯಡಿಯೂರಪ್ಪ ಅವರ ಆಪ್ತ ಸಹಾಯಕ ಕೇಶವ್ ಅವರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿರುವುದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ನವೆಂಬರ್ 1 ರಂದು ನಡೆದ ವಿವಾಹದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಹ್ಯಾಂಡ್ ಶೇಕ್ ಮಾಡಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಜಿಲ್ಲೆಯಲ್ಲಿ ಕಬ್ಬು ಬೆಳಗಾರರ ಸಮಸ್ಯೆ ಇದ್ದರೂ ಕೂಡ ಸಮಸ್ಯೆ ಆಲಿಸಬೇಕಿದ್ದ ಸಚಿವರು ಅತ್ತ ಸುಳಿದಿರಲಿಲ್ಲ. ಆದರೆ ಇದೀಗ ವಿವಾಹದಲ್ಲಿ ಕಾಣಿಸಿಕೊಂಡಿದ್ದರು.
ಇದರಿಂದ ಸಮಸ್ಯೆ ಆಲಿಸಬೇಕಾದ ಸಮಯದಲ್ಲಿ ಜಿಲ್ಲೆಗೆ ಆಗಮಿಸದ ಸಚಿವರ ವಿರುದ್ಧ ಇದೀಗ ಜಿಲ್ಲೆಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.