ಬಾಲ್ಯ ಗೆಳೆಯನ ಸಾವಿಗೆ ಬಿಕ್ಕಿ-ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ

Published : Aug 09, 2020, 07:49 PM ISTUpdated : Aug 09, 2020, 08:02 PM IST
ಬಾಲ್ಯ ಗೆಳೆಯನ ಸಾವಿಗೆ ಬಿಕ್ಕಿ-ಬಿಕ್ಕಿ ಅತ್ತ ಸಚಿವ ರಮೇಶ್ ಜಾರಕಿಹೊಳಿ

ಸಾರಾಂಶ

ಬಾಲ್ಯ ಸ್ನೇಹಿತನ ನಿಧನದಿಂದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ  ಬಿಕ್ಕಿ ಬಿಕ್ಕಿ ಅತ್ತಿರುವ ಪ್ರಸಂಗ ನಡೆದಿದೆ.

ಬೆಳಗಾವಿ, (ಆ.09): ಅನಾರೋಗ್ಯದಿಂದ ನಿಧನರಾದ ನಗರಸಭೆ ಸದಸ್ಯ ಎಸ್.ಎ. ಕೋತ್ವಾಲ್  ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬಿಕ್ಕಿ ಬಿಕ್ಕಿ ಅತ್ತರು.

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ನೇಹಿತ ಎಸ್‌.ಎ ಕೊತ್ವಾಲ್ ಅನಾರೋಗ್ಯದಿಂದಾಗಿ ಇಂದು (ಭಾನುವಾರ) ಮೃತಟ್ಟಿದ್ದು, ಗೋಕಾಕ್‌ನ ಬಸವೇಶ್ವರ್ ವೃತ್ತದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರು ಆಪ್ತ ಗೆಳಯನ ಪಾರ್ಥಿವ ಶರೀರದ ಮುಂದೆ  ನಿಂತು ಕಣ್ಣೀರಿಟ್ಟರು. 

ರೈತರಿಗೆ ಮೋದಿ ಆಫರ್, ಕನ್ನಡದಲ್ಲಿ ವಿದ್ಯಾ ಬಾಲನ್ ಆನ್ಸರ್: ಆ.9ರ ಟಾಪ್ 10 ಸುದ್ದಿ!
 
ಈ ವೇಳೆ ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಸೇರಿದಂತೆ ಇತರೆ ನಾಯಕರುಗಳು ಸಚಿವರನ್ನು ಸಮಾಧಾನ ಪಡಿಸಿದ ದೃಶ್ಯಕಂಡು ಬಂತು. ನಂತರ ಗೆಳೆಯನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ರಮೇಶ್ ಜಾರಕಿಹೊಳಿ ಮೌನವಾಗಿದ್ದರು.

ಗೋಕಾಕ ನಗರಸಭೆಗೆ 8 ಬಾರಿ ಆಯ್ಕೆಯಾಗಿದ್ದ ಅವರು, ಹಲವು ಜವಾಬ್ದಾರಿಯುತ ಹುದ್ದೆಗಳನ್ನು ಅಚ್ಚುಕಟ್ಟಾಗಿ  ನಿಭಾಯಿಸಿದ್ದರು. ಅಲ್ಲದೇ ಸಚಿವ ರಮೇಶ ಜಾರಕಿಹೊಳಿ ಬಾಲ್ಯದ ಸ್ನೇಹಿತರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ