
ಸಂಡೂರು(ನ.08): ಬಿಜೆಪಿಯವರಿಗೆ ಇಲ್ಲಿನ ಗುಡ್ಡಗಳ ಮೇಲೆ ಪ್ರೀತಿ. ಆದರೆ, ಕಾಂಗ್ರೆಸ್ಗೆ ಬಡವರ ಮೇಲೆ ಪ್ರೀತಿ ಇದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ಕಾಂಗ್ರೆಸ್ನಿಂದ ಹಮ್ಮಿಕೊಂಡಿದ್ದ ಬಹಿರಂಗ ಪ್ರಚಾರ ಸಭೆಗಳಲ್ಲಿ ಅವರು ಮಾತನಾಡಿದರು.
ಬಿಜೆಪಿಯ ಜನಾರ್ದನ ರೆಡ್ಡಿ, ಶ್ರೀರಾಮುಲು, ಕರುಣಾಕರ ರೆಡ್ಡಿ ಮಂತ್ರಿಗಳಾಗಿದ್ದರು. ಶಾಂತಕ್ಕ, ಫಕ್ಕೀರಪ್ಪ, ದೇವೇಂದ್ರಪ್ಪ ಸಂಸದರಾಗಿದ್ದರು. ಕ್ಷೇತ್ರದ ಅಭಿವೃದ್ಧಿಗೆ ಅವರ ಕೊಡುಗೆ ಏನೂ ಇಲ್ಲ. ಅವರಿಂದ ಒಂದು ಬಲ್ಬ ಇಲ್ಲ, ಗುಡಿ ಇಲ್ಲ, ಅದಕ್ಕೆ ಸುಣ್ಣವಿಲ್ಲ ಎಂದರು.
ಗ್ಯಾರಂಟಿ ಬಗ್ಗೆ ಮಹಾರಾಷ್ಟ್ರ ಬಿಜೆಪಿ ಸುಳ್ಳು ಜಾಹೀರಾತು: ಸಿದ್ದರಾಮಯ್ಯ ಗರಂ
ಬಿಜೆಪಿಯವರು ಕ್ಷೇತ್ರಕ್ಕೆ ಬಂದು ನಮ್ಮನ್ನು ಬಯ್ಯುತ್ತಾರೆ. ಅವರು ನಮ್ಮನ್ನು ಬಯ್ಯಲಿ. ಅವರ ಜತೆ ನಮ್ಮ ಅಣ್ಣನೂ ಸೇರಿಕೊಂಡಿ ದ್ದಾನೆ. ಅವರನ್ನು ಪ್ರೀತಿಯಿಂದ ಸ್ವಾಗತಿಸಿ. ನಮ್ಮನ್ನು ಬಯ್ಯುವ ಅವರಿಗೆ ಲಡ್ಡು ಕೊಡಿ. ಮತವನ್ನು ಈ. ಅನ್ನಪೂರ್ಣಾ ತುಕಾರಾಂ ಅವರಿಗೆ ನೀಡಿ ಎಂದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 162 ಭರವಸೆಗಳನ್ನು ಈಡೇರಿಸಿದೆ. ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕ ₹60 ಸಾವಿರ ಕೋಟಿಯಂತೆ 5 ವರ್ಷಕ್ಕೆ ₹3 ಲಕ್ಷ ಕೋಟಿ ಖರ್ಚು ಮಾಡುತ್ತಿದೆ. 2004ರ ಹಿಂದೆ ಈ ಕ್ಷೇತ್ರ ಅತಿ ಹಿಂದುಳಿದ ಕ್ಷೇತ್ರವೆನಿಸಿತ್ತು. ಇಂದು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಿದೆ ಎಂದರು.
ತುಂಗಭದ್ರಾ ನದಿ ನೀರನ್ನು ಪೂರೈಸಲು ಕ್ರಮಕೈಗೊಳ್ಳಲಾಗಿದೆ. ಕ್ಷೇತ್ರದಲ್ಲಿನ 590 ಕಿ.ಮೀ. ರಸ್ತೆ ಅಭಿವೃದ್ಧಿ ಪಡಿಸಲಾಗಿದೆ. ಇಲ್ಲಿ 11 ವಸತಿ ಶಾಲೆಗಳು, 3 ಐಟಿಐ ಹಾಗೂ ಒಂದು ಸರ್ಕಾರಿ ಪಾಲಿಟೆಕ್ನಿಕ್ ಆರಂಭಿಸಲಾಗಿದೆ. 200 ಬೆಡ್ ಆಸ್ಪತ್ರೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕ್ಷೇತ್ರದಲ್ಲಿ 13 ಆ್ಯಂಬುಲೆನ್ಸ್ ವಾಹನಗಳ ಮೂಲಕ ಆರಂಭಿಸಲಾಗಿರುವ ಕ್ಲಿನಿಕ್ ಆನ್ ವೀಲ್ಸ್ ಪ್ರಯೋಜನವನ್ನು 7 ಲಕ್ಷಕ್ಕೂ ಹೆಚ್ಚು ಜನರು ಪಡೆದುಕೊಂಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.