ಬಿಎಸ್‌ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್‌ ಸ್ಫೋಟಗಳಾಗಿರಲಿಲ್ಲವೆ?: ಸಚಿವ ಸಂತೋಷ್‌ ಲಾಡ್‌

Published : Mar 07, 2024, 11:54 AM IST
ಬಿಎಸ್‌ವೈ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್‌ ಸ್ಫೋಟಗಳಾಗಿರಲಿಲ್ಲವೆ?: ಸಚಿವ ಸಂತೋಷ್‌ ಲಾಡ್‌

ಸಾರಾಂಶ

ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ರಾಜ್ಯದಲ್ಲಿ ಬಾಂಬ್‌ ಸ್ಫೋಟ ಪ್ರಕರಣಗಳು ನಡೆದಿಲ್ಲವೆ? ಆವಾಗ ಇವರು ರಾಜೀನಾಮೆ ನೀಡಿದ್ದರಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಪ್ರಶ್ನಿಸಿದರು.   

ಹುಬ್ಬಳ್ಳಿ (ಮಾ.07): ಹಿಂದೆ ಬಿ.ಎಸ್‌.ಯಡಿಯೂರಪ್ಪ, ಜಗದೀಶ ಶೆಟ್ಟರ, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ರಾಜ್ಯದಲ್ಲಿ ಬಾಂಬ್‌ ಸ್ಫೋಟ ಪ್ರಕರಣಗಳು ನಡೆದಿಲ್ಲವೆ? ಆವಾಗ ಇವರು ರಾಜೀನಾಮೆ ನೀಡಿದ್ದರಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಪ್ರಶ್ನಿಸಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಾಕಿಸ್ತಾನ ಪರ ಘೋಷಣೆ ಹಾಕಿದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಏಕೆ ರಾಜೀನಾಮೆ ನೀಡಬೇಕು?. ಹಿಂದೆ ಬಿಜೆಪಿ ಕಾರ್ಯಕರ್ತರೇ ಮಂಡ್ಯದಲ್ಲಿ ಘೋಷಣೆ ಹಾಕಿದ್ದಾರಲ್ಲ,‌ ಮೋದಿ, ಗೃಹ ಸಚಿವರು ರಾಜೀನಾಮೆ ಕೊಡುತ್ತಾರೆಯೇ?. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರಾಜ್ಯದಲ್ಲಿ ಬಾಂಬ್ ಸ್ಪೋಟಗಳಾಗಿವೆ. ಆಗ ಇವರಿಗೆ ನೈತಿಕತೆ ಇರಲಿಲ್ಲವೆ?.

ಅಭಿವೃದ್ಧಿಯ ವಿಚಾರವೇ ಗೊತ್ತಿಲ್ಲ: ಇಂತಹ ಚಟುವಟಿಕೆಗಳಿಗೆ ಯಾವುದೇ ಪಕ್ಷ ಬೆಂಬಲ ಕೊಡುವುದಿಲ್ಲ. ಚುನಾವಣೆ ಬಂದಿರುವುದರಿಂದಾಗಿ ಪಾಕಿಸ್ತಾನ್, ಬ್ಲಾಸ್ಟ್ ಇತ್ಯಾದಿ ಮುನ್ನೆಲೆಗೆ ಬರುತ್ತಿವೆ. ಪಾಕಿಸ್ತಾನ, ಅಪಘಾನಿಸ್ತಾನ್, ಟೆರರಿಸ್ಟ್ ಈ ಪದ ಬಿಟ್ಟರೆ ಬಿಜೆಪಿಯವರಿಗೆ ಅಭಿವೃದ್ಧಿಯ ವಿಚಾರವೇ ಗೊತ್ತಿಲ್ಲ. ಇಂತಹ ವಿಚಾರಗಳ ಮೇಲೆಯೇ ಇವರು ಚುನಾವಣೆಗೆ ಹೋಗುತ್ತಾರೆ. ಕಳೆದ ಹತ್ತು ವರ್ಷದಿಂದಲೂ ಅದನ್ನೇ ಮಾಡಿದ್ದಾರೆ ಎಂದು ಆರೋಪಿಸಿದರು. ಪಾಕಿಸ್ತಾನ, ಅಪಘಾನಿಸ್ತಾನ, ಮುಸಲ್ಮಾನ, ಹಿಂದು, ಹಿಂದುತ್ವ ಈ ಐದು ವಿಷಯಗಳ ಮೇಲೆ ಬಿಜೆಪಿಯವರು ಲೋಕಸಭಾ ಚುನಾವಣೆ ಮಾಡುತ್ತಾರೆ. ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಬಿಜೆಪಿಯ ಸುಳ್ಳಿನ ಬಗ್ಗೆ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್‌ ಜಾರಿಗೆ ಬದ್ಧ: ಸಚಿವ ಸಂತೋಷ್‌ ಲಾಡ್‌

ನರೇಗಾ ಯೋಜನೆ ಕೂಲಿ ಹಣ ಬಿಡುಗಡೆಯಾಗದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಲಾಡ್‌, ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಬೇಕು. ಆದರೆ, ಕೂಲಿ ಮಾಡಿ 4-5 ತಿಂಗಳಾದರೂ ಸಹ ಹಣ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ₹1400 ಕೋಟಿ ಬಾಕಿ ಹಣವಿದೆ. ಬರ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 50 ದಿನ ಹೆಚ್ಚಿನ ಕೆಲಸ ಕೇಳಿದ್ದೇವೆ. ಆದರೆ, ಇದುವರೆಗೂ ಕೇಂದ್ರ ಒಪ್ಪಿಗೆ ಸೂಚಿಸಿಲ್ಲ. ಬರಗಾಲದ ಪರಿಹಾರವಾಗಿ ನಾವು ಕೈಲಾದಷ್ಟು ಕೊಟ್ಟಿದ್ದೇವೆ. ಆದರೆ, ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!