ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ: ಸಚಿವ ಸತೀಶ್ ಜಾರಕಿಹೊಳಿ

Published : Oct 28, 2025, 05:32 AM IST
satish jarkiholi

ಸಾರಾಂಶ

ಏಕನಾಥ್ ಶಿಂಧೆ ಒಬ್ಬರೇ, ಪವಾರ್ ಕೂಡ ಒಬ್ಬರೇ ಅವರಂತೆ ಮತ್ತೊಬ್ಬರು ಹುಟ್ಟಿಕೊಳ್ಳಲು ಆಗುವುದಿಲ್ಲ. ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಆಗುವುದಿಲ್ಲ. ಯಾವುದೇ ಕ್ರಾಂತಿಗೂ ಹೈಕಮಾಂಡ್‌ ಅವಕಾಶ ನೀಡುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರು (ಅ.28): ‘ಏಕನಾಥ್ ಶಿಂಧೆ ಒಬ್ಬರೇ, ಪವಾರ್ ಕೂಡ ಒಬ್ಬರೇ ಅವರಂತೆ ಮತ್ತೊಬ್ಬರು ಹುಟ್ಟಿಕೊಳ್ಳಲು ಆಗುವುದಿಲ್ಲ. ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಆಗುವುದಿಲ್ಲ. ಯಾವುದೇ ಕ್ರಾಂತಿಗೂ ಹೈಕಮಾಂಡ್‌ ಅವಕಾಶ ನೀಡುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ರಾಜ್ಯದಲ್ಲಿ ಬಂಡಾಯದ ಪ್ರಯತ್ನ ಅಸಾಧ್ಯ ಎಂದು ಹೇಳಿರುವ ಅವರು, ‘ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ. ಆದರೂ ಬಿಜೆಪಿಗೆ ಯಾವುದೇ ಪ್ರಯೋಜನ ಇರುವುದಿಲ್ಲ. ರೊಟ್ಟಿ ಬಿದ್ದರೂ ತುಪ್ಪದಲ್ಲೇ ಬೀಳುತ್ತದೆ. ಹೀಗಾಗಿ ಬೇರೊಂದು ಪಕ್ಷಕ್ಕೆ ಲಾಭವಾಗಲ್ಲ’ ಎಂದು ಸೂಚ್ಯವಾಗಿ ಹೇಳಿದರು.

ಸುದ್ದಿಗೋಷ್ಠಿ ನಡೆಸಿದ ಅವರು ಮಹಾರಾಷ್ಟ್ರ ಮಾದರಿ ರಾಜಕೀಯ ಬೆಳವಣಿಗೆ ನಡೆಯಲಿದೆ ಎಂದಿರುವ ಪ್ರತಿಪಕ್ಷಗಳಿಗೆ ಪ್ರತಿಕ್ರಿಯಿಸಿ, ‘ಶಿಂಧೆ ಹಾಗೂ ಪವಾರ್‌ರಂಥವರು ಮತ್ತೊಬ್ಬರು ಆಗುವುದಿಲ್ಲ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ. ಇನ್ನೊಂದು 20-30 ದಿನ ಇದೆ ಅಷ್ಟೇ. ಏನಾಗುತ್ತೆ ನೋಡೋಣ. ಯಾವುದೇ ಕ್ರಾಂತಿ ಆಗೋದಕ್ಕೆ ಹೈಕಮಾಂಡ್ ಬಿಡಬೇಕಲ್ವಾ? ಹೈಕಮಾಂಡ್ ಇದಕ್ಕೆ ಅವಕಾಶ ಕೊಡುವುದಿಲ್ಲ’ ಎಂದರು.

ಅಹಿಂದ ನಾಯಕತ್ವ 2028ಕ್ಕೆ ನಿರ್ಧಾರ: ಅಹಿಂದ ನಾಯಕತ್ವ ವಿಚಾರವಾಗಿ ಮಾತನಾಡಿದ ಸತೀಶ್ ಜಾರಕಿಹೊಳಿ, ನಾನು 30 ವರ್ಷದಿಂದ ಅಹಿಂದದ ಭಾಗವಾಗಿದ್ದೇನೆ. ಜೆಡಿಎಸ್ ನಲ್ಲಿದ್ದಾಗಲೂ ಅಹಿಂದ ಭಾಗವೇ ಆಗಿದ್ದೆ. ಈಗಲೂ ಅಹಿಂದ ಭಾಗವೇ. ಪರಮೇಶ್ವರ್, ಮಹದೇವಪ್ಪ ಎಲ್ಲರೂ ಅದರ ಭಾಗವೇ ಆಗಿದ್ದು, 2028ರಲ್ಲಿ ಚುನಾವಣೆ ಆಗಬೇಕು. ಅಂದಿನ ಸ್ಥಿತಿಗತಿ ನೋಡಿಕೊಂಡು ನಾಯಕತ್ವ ನಿರ್ಧಾರ ಆಗಲಿದೆ ಎಂದು ಹೇಳಿದರು.

ಯತೀಂದ್ರ ಹೇಳಿಕೆಗೆ ಸಮರ್ಥನೆ

ಯತೀಂದ್ರ ಹೇಳಿಕೆ ಸಮರ್ಥಿಸಿದ ಸತೀಶ್, ಯತೀಂದ್ರ ಅವರು ಎಲ್ಲೂ ಮುಖ್ಯಮಂತ್ರಿ ಸ್ಥಾನವಾಗಲಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಮಾತನಾಡಿಲ್ಲ. ನಾವೇನೂ ಮುಖ್ಯಮಂತ್ರಿ ಸ್ಥಾನ ಕೇಳಿಲ್ಲ. ಯಾರು ಯತೀಂದ್ರ ಹೇಳಿಕೆ ವಿರೋಧಿಸುತ್ತಿದ್ದಾರೋ ಅವರು ತಪ್ಪು ತಿಳಿದುಕೊಂಡಿದ್ದಾರೆ ಎಂದರ್ಥ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ