ಸಿಎಂ ಕೂಗು: ಈಗಾಗಲೇ ಮುಖ್ಯಮಂತ್ರಿ ಇದ್ದಾರೆ ಅವರನ್ನ ಇಳಿಸುವವರು ಯಾರು?, ಸತೀಶ ಜಾರಕಿಹೊಳಿ

Published : Sep 09, 2024, 02:04 PM ISTUpdated : Sep 09, 2024, 02:07 PM IST
ಸಿಎಂ ಕೂಗು: ಈಗಾಗಲೇ ಮುಖ್ಯಮಂತ್ರಿ ಇದ್ದಾರೆ ಅವರನ್ನ ಇಳಿಸುವವರು ಯಾರು?, ಸತೀಶ ಜಾರಕಿಹೊಳಿ

ಸಾರಾಂಶ

ಕೋರ್ಟ್‌ ಅನುಮತಿ ನೀಡಿದರೂ ಸಿಎಂ ಮುಂದಿನ ನಿರ್ಧಾರದ ಬಗ್ಗೆ ಚರ್ಚೆಯಾಗಿಲ್ಲ. ದೇಶದಲ್ಲಿ ಬಹಳಷ್ಟು ಜನರ ಮೇಲೆ ಪ್ರಕರಣಗಳು ಇದ್ದರೂ ಸಿಎಂ, ಸಚಿವರು ಇದ್ದಾರೆ. ಕೋರ್ಟ್‌ ಅನುಮತಿ ನೀಡಿದರೂ ರಾಜೀನಾಮೆ ನೀಡಬೇಕೆಂದು ಕಾನೂನಿನಲ್ಲಿ ಹೇಳಿಲ್ಲ ಎಂದ ಸಚಿವ ಸತೀಶ ಜಾರಕಿಹೊಳಿ 

ಚಿಕ್ಕೋಡಿ(ಸೆ.09):  ರಾಜ್ಯದಲ್ಲಿ ಯಾವುದೇ ಸಿಎಂ ಕೂಗು ಕೇಳುವ ಪ್ರಶ್ನೆ ಇಲ್ಲ. ಈಗಾಗಲೇ ಸಿಎಂ ಇದ್ದಾರೆ ಅವರನ್ನ ಇಳಿಸುವವರು ಯಾರು?. ಪದೇ ಪದೇ ಸಿಎಂ ವಿಚಾರ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಸರಕಾರದ ಮುಂದೆ ಸಾಕಷ್ಟು ಸಮಸ್ಯೆಗಳಿವೆ ಬಗೆ ಹರಿಸಲು ಸಮಯ ಬೇಕಿದೆ. ಸಿಎಂ ಅವರೇ ಇದ್ದಾರೆ ಸರಕಾರ ಮುಂದುವರೆಯುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ  ಹೇಳಿದ್ದಾರೆ. 

ಇಂದು(ಸೋಮವಾರ) ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು, ಕೋರ್ಟ್‌ ಅನುಮತಿ ನೀಡಿದರೂ ಸಿಎಂ ಮುಂದಿನ ನಿರ್ಧಾರದ ಬಗ್ಗೆ ಚರ್ಚೆಯಾಗಿಲ್ಲ. ದೇಶದಲ್ಲಿ ಬಹಳಷ್ಟು ಜನರ ಮೇಲೆ ಪ್ರಕರಣಗಳು ಇದ್ದರೂ ಸಿಎಂ, ಸಚಿವರು ಇದ್ದಾರೆ. ಕೋರ್ಟ್‌ ಅನುಮತಿ ನೀಡಿದರೂ ರಾಜೀನಾಮೆ ನೀಡಬೇಕೆಂದು ಕಾನೂನಿನಲ್ಲಿ ಹೇಳಿಲ್ಲ ಎಂದು ತಿಳಿಸಿದ್ದಾರೆ. 

ದೇಶಪಾಂಡೆ, ಎಂಬಿ ಪಾಟೀಲ್ ಆಯ್ತು, ಈಗ ಜಾಲತಾಣದಲ್ಲಿ 'ಜಾರಕಿಹೊಳಿ ಫಾರ್ ಸಿಎಂ' ಅಭಿಯಾನ!

ಸಿಎಂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಕೇಳಬೇಡಿ ಪ್ಲೀಸ್ ಪ್ಲೀಸ್ ಎಂದು ಸತೀಶ ಜಾರಕಿಹೊಳಿ ಮನವಿ ಮಾಡಿದ್ದಾರೆ.  ಜನ ನಮ್ಮನ್ನ ನೋಡಿ ಉಗಳುತ್ತಾರೆ ಬರೇ ಬರೇ ಸಿಎಂ ಎಂದರೇ ಇವರಗೇನೂ ಕೆಲಸ ಇಲ್ಲ ಎಂದು ಜನ ಉಗಿಯುತ್ತಾರೆ. ಪದೇ ಪದೇ ಈ ವಿಚಾರ ಕೇಳಬೇಡಿ ಎಂದಿದ್ದಾರೆ.  ಸತೀಶ ಜಾರಕಿಹೊಳಿ ಸಿಎಂ ಆಗಬೇಕು ಎನ್ನುವ ಅಭಿಯಾನ ನಾವು ಆರಂಭಿಸಿಲ್ಲ ಎಂದಷ್ಟೇ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!