Satish Jarkiholi: 'ಸಿದ್ದರಾಮಯ್ಯರೊಡನೆ ಅಸಮಾಧಾನ ನಮ್ಮ ಸಮಸ್ಯೆ' ಎಂದಿದ್ದ ಜಾರಕಿಹೊಳಿ ಈಗ ಮತ್ತೊಂದು ಹೇಳಿಕೆ!

Kannadaprabha News   | Kannada Prabha
Published : Jul 18, 2026, 06:38 AM IST
Minister Satish Jarkiholi says that there is no confusion between Siddaramaiah and me  rav

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiah) ಹಾಗೂ ನನ್ನ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಸ್ಪಷ್ಟಪಡಿಸಿದ್ದಾರೆ.

ನವದೆಹಲಿ (ಜು.18): ಮಾಜಿ ಸಿಎಂ ಸಿದ್ದರಾಮಯ್ಯ(Former CM Siddaramaiah) ಹಾಗೂ ನನ್ನ ನಡುವೆ ಯಾವುದೇ ಗೊಂದಲ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ(Satish Jarkiholi) ಸ್ಪಷ್ಟಪಡಿಸಿದ್ದಾರೆ. 

ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಇಲ್ಲ. ಆದರೆ, ಕೆಲವು ಶಕ್ತಿಗಳು ನಮ್ಮ ನಡುವಿನ ಸ್ನೇಹಕ್ಕೆ ಹುಳಿ ಹಿಂಡುವ, ಅದರ ಲಾಭ ಪಡೆಯುವ ಯತ್ನ ನಡೆಸಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ. ನಮ್ಮದು 30 ವರ್ಷಗಳ ಸಂಬಂಧ ಎಂದರು. 

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ ಜೊತೆ ಚರ್ಚೆ ನಡೆಸಿದ್ದೇವೆ. ನಮ್ಮ ಅಭಿಪ್ರಾಯ ಹೇಳಿದ್ದೇವೆ. ಉಳಿದಂತೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಆದಷ್ಟು ಬೇಗ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ ಎಂದರು.

ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಅವಕಾಶ ಕೊಡುವುದು ಒಳ್ಳೆಯದು. ಮುಂದೆ ಅವರು ಪಕ್ಷಕ್ಕೆ ಆಸ್ತಿ ಆಗ್ತಾರೆ. ಬೆಳಗಾವಿ ಜಿಲ್ಲೆಗೆ ಮತ್ತೊಂದು ಸ್ಥಾನ ಕೊಡಲೇ ಬೇಕು ಎಂದು ಅವರು ಆಗ್ರಹಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದೇಶದ ಗಮನ ಸೆಳೀತಿರೋ ಉಪವಾಸ ನಿರತ ವಾಂಗ್‌ಚುಕ್ ಮನೆ: ಬಗೆದಷ್ಟೂ ಕೌತುಕಗಳ ಕೇಂದ್ರ
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?