
ವಿಜಯಪುರ(ಅ.04): ಶಾಮನೂರ ಶಿವಶಂಕರಪ್ಪನವರು ಮುಖ್ಯಮಂತ್ರಿಗಳಿಗಿಂತಲೂ ಹಿರಿಯರು.ಅವರು ಲಿಂಗಾಯತ ಸಮುದಾಯಕ್ಕೆ ಸೂಕ್ತ ಸ್ಥಾನ ಕಲ್ಪಿಸಲು ಸಲಹೆ ನೀಡಿದ್ದರೆ ಮುಖ್ಯಮಂತ್ರಿಗಳು ಸ್ವೀಕರಿಸುತ್ತಿದ್ದರು ಎಂಬುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾವುದೇ ಸರ್ಕಾರ ಇದ್ದರೂ ಜಾತಿ ಆಧಾರದ ಮೇಲೆ ಅಧಿಕಾರಿಗಳ ಪೋಸ್ಟಿಂಗ್ ಮಾಡಲು ಆಗುವುದಿಲ್ಲ ಎಂದರು. ಸಿಎಂ ಇಬ್ರಾಹಿಂ ಕಾಂಗ್ರೆಸ್ ಗೆ ಬಂದರೆ ಸ್ವಾಗತಿಸುತ್ತೇನೆ. ಅವರು ಮೊದಲಿನಿಂದಲೂ ಬಿಜೆಪಿ ವಿರೋಧಿ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ರಾಜ್ಯಾಧ್ಯಕ್ಷರಿಗೆ ಗೊತ್ತಿಲ್ಲವೆಂದರೆ ಅವರಿಗೆ ನೋವಾಗಲ್ವಾ. ಜೆಡಿಎಸ್ ಜಾತ್ಯಾತೀತ ಪರದೆ ಬಹಳ ಹಿಂದೆಯೇ ಸರಿದು ಹೋಗಿದೆ ಎಂದು ಸಚಿವರು ಹೇಳಿದರು.
ಶಿವಮೊಗ್ಗ ಗಲಭೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಘಟನೆಗೆ ಸರ್ಕಾರ ಕಾರಣವೆಂದು ವಿರೋಧ ಪಕ್ಷಗಳ ಹೇಳಿಕೆ ಸರಿಯಲ್ಲ. ಸರ್ಕಾರ ಬರುತ್ತವೆ, ಹೋಗುತ್ತವೆ. ಸರ್ಕಾರದ ಮೇಲೆ ಗೂಬೆ ಕೂರಿಸಬಾರದು. ಸೌಹಾರ್ದತೆಯಿಂದ ಬಾಳುವ ನೈತಿಕ ಹೊಣೆಗಾರಿಕೆ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.