ಬಿಜೆಪಿಯವ್ರು ರಾಮಮಂದಿರ ಜಪ ಮಾಡುವ ಮೊದಲು ಜನರಿಗೆ ಅನ್ನ ನೀಡಲಿ: ಸಚಿವ ತಂಗಡಗಿ ಆಕ್ರೋಶ

Published : Jan 13, 2024, 04:16 PM IST
ಬಿಜೆಪಿಯವ್ರು ರಾಮಮಂದಿರ ಜಪ ಮಾಡುವ ಮೊದಲು ಜನರಿಗೆ ಅನ್ನ ನೀಡಲಿ: ಸಚಿವ ತಂಗಡಗಿ ಆಕ್ರೋಶ

ಸಾರಾಂಶ

ಬಿಜೆಪಿಯವ್ರು ಅಯೋಧ್ಯಾ ಶ್ರೀರಾಮ ಮಂದಿರವನ್ನು ತಮ್ಮ ಸ್ವಂತ ಆಸ್ತಿ ಎಂದು ತಿಳಿದಿದ್ದಾರೆ. ಎಷ್ಟು ಜನ ಬಿಜೆಪಿಯವ್ರು ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಸಚಿವ ಶಿವರಾಜ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ (ಜ.13): ಬಿಜೆಪಿಯವ್ರು ಅಯೋಧ್ಯಾ ಶ್ರೀರಾಮ ಮಂದಿರವನ್ನು ತಮ್ಮ ಸ್ವಂತ ಆಸ್ತಿ ಎಂದು ತಿಳಿದಿದ್ದಾರೆ. ಎಷ್ಟು ಜನ ಬಿಜೆಪಿಯವ್ರು ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಸಚಿವ ಶಿವರಾಜ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು.

ಇಂದು ಕೊಪ್ಪಳದ ಕಾರಟಗಿ ತಾಲೂಕಿನ ಮಾರಿಕ್ಯಾಂಪ್‌ನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಾನು ಸಹ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೇನೆ. ರಾಮ‌ ಮಂದಿರಕ್ಕೆ ನಾವು ವಿರೋಧ ಮಾಡುತ್ತಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಬಾಗಿಲು ತೆಗೆಸಿದ್ದೇ ಮಾಜಿ ಪ್ರಧಾನಿ ರಾಜೀವ್ ಗಾಂಧಿ. ರಾಮ ನಮ್ಮವನೇ, ಹನುಮ ನಮ್ಮವನೇ ಎಂದ ಶಿವರಾಜ ತಂಗಡಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ 5 ಕೆಜಿ ಅಕ್ಕಿ ಹಣವನ್ನು ಜನರ ಖಾತೆಗೆ ಹಾಕುತ್ತಿದ್ದಾರೆ. ಬಿಜೆಪಿಯವರು ಮಂತ್ರಾಕ್ಷತೆ ನೀಡಲು ಓಡಾಡುತ್ತಿದ್ದಾರೆ, ಮೊದಲು ಜನರಿಗೆ ಅನ್ನ ನೀಡಲಿ ಎಂದು ಕೇಂದ್ರ ಹಾಗೂ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಸಚಿವ ಶಿವರಾಜ ತಂಗಡಗಿ ಆಕ್ರೋಶ ವ್ಯಕ್ತಪಡಿಸಿದರು.

ಅವನು ಏನಾದ್ರೂ ಹೇಳಲಿ, ಅವನಿಗೆ ಸೋಲ್ತೀನಿ ಅನ್ನೋ ಹೆದರಿಕೆ ಶುರು ಆಗಿದೆ: ಪ್ರತಾಪ್ ಸಿಂಹ ವಿರುದ್ಧ ಸಿಎಂ ಕಿಡಿ

ಈಗ ರಾಮ ಮಂದಿರ ಜಪ ಮಾಡುತ್ತಿದ್ದಾರೆ 15 ದಿನಗಳ ಬಳಿಕ ಪಾಕಿಸ್ತಾನ ವಿಷಯ ತರ್ತಾರೆ. ಚುನಾವಣೆಗೆಗಾಗಿ ರಾಮ ಮಂದಿರ, ಪಾಕಿಸ್ತಾನ ಹಾಗೂ ಸೈನಿಕರ ಜಪ‌ ಮಾಡ್ತಾರೆ. ಬಿಜೆಪಿಯವರು ಮಾಡೋದೆಲ್ಲ ಚುನಾವಣಾ ನಾಟಕ ಎಂದು ಜನರಿಗೆ ಗೊತ್ತಾಗಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!