ಚುನಾವಣೆ ಬಂದಾಗ ಮಾತ್ರ ಪಾಕಿಸ್ತಾನ, ಮಸೀದಿ, ಗಣೇಶ ನೆನಪು: ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ತಂಗಡಗಿ

Published : Oct 08, 2023, 10:11 PM IST
ಚುನಾವಣೆ ಬಂದಾಗ ಮಾತ್ರ ಪಾಕಿಸ್ತಾನ, ಮಸೀದಿ, ಗಣೇಶ ನೆನಪು: ಬಿಜೆಪಿ ವಿರುದ್ಧ ಹರಿಹಾಯ್ದ ಸಚಿವ ತಂಗಡಗಿ

ಸಾರಾಂಶ

ರಾಹುಲ್ ಗಾಂಧಿ ಎಂದರೆ ಬಿಜೆಪಿಗೆ ಭಯ ಉಂಟಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರುತ್ತವೆ: ಸಚಿವ ಶಿವರಾಜ ತಂಗಡಗಿ 

ರಾಮಮೂರ್ತಿ ನವಲಿ

ಗಂಗಾವತಿ(ಅ.08):  ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ವಯೋಮಾನ ಕಡ್ಡಾಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.  

ಇಂದು(ಭಾನುವಾರ) ತಾಲೂಕಿನ ಹಣವಾಳ ಗ್ರಾಮದಲ್ಲಿ 100 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ ಅವರು, ಈಗಾಗಲೇ ರಾಜ್ಯೋತ್ಸವ ಪ್ರಶಸ್ತಿಗೋಸ್ಕರ ಸಾಕಷ್ಟು ಅರ್ಜಿಗಳು ಬಂದಿವೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಹಾಕಿದ್ದಾರೆ. ಇದಕ್ಕಾಗಿ 38 ಸದಸ್ಯರುಳ್ಳ ಸಮಿತಿ ರಚೆನೆಯಾಗಿದ್ದು, ಸೆ.11 ರಂದು ಸಭೆ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರನ್ನು ಸರಕಾರ ಗುರಿತಿಸಿ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದರು.

ಮುಸ್ಲಿಂ ಸಮುದಾಯದವರು ಸಿದ್ದು ನಂಬಿ ಬಂದವರು: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ

ನ.30ರ ತನಕ ಎಡದಂಡೆ ಕಾಲುವೆಗೆ ನೀರು: 

ತುಂಗಭದ್ರಾ ಎಡದಂಡೆ ಕಾಲುವೆಗೆ  ನ.30 ರ ತನಕ ನೀರು ಬಿಡಲಾಗುತ್ತದೆ ರೈತರು ಆತಂಕ ಪಡಬೇಕಾಗಿಲ್ಲ. 3 ದಿನದಲ್ಲಿ ಜಲಾಶಯಕ್ಕೆ 5 ಸಾವಿರ ಕ್ಯೂಸೆಕ್ಸ್ ನೀರು ಬಂದಿದೆ, ಎಡರನೇ ಬೆಳೆಗೆ ನೀರು ಬಿಡುವ ವಿಚಾರ ನಂತರ ಚರ್ಚಿಸಲಾಗುತ್ತದೆ ಎಂದರು. 

ಅಮೆರಿಕದ ವಿವಿಯಿಂದ ಖ್ಯಾತ ವಿಜ್ಞಾನಿಗಳ ಪಟ್ಟಿ ಘೋಷಣೆ: ಗಂಗಾವತಿಯ ಇಬ್ಬರಿಗೆ ಸ್ಥಾನ

ನವಲಿ ರೈಸ್ ಪಾರ್ಕ್‌ಗೆ 158 ಕೋಟಿ ರೂ. ಅನುದಾನವನ್ನ ಈ ಹಿಂದೆ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ನೀಡಲಾಗಿತ್ತು. ಈಗ ನಾವೇ ಮಾಡಿದ್ದೇವೆ ಎಂದು ಮಾಜಿ ಶಾಸಕರು ಹೇಳಿ ಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಜನರಿಗೆ ಗೊತ್ತಿದೆ. ಜಾತಿಗಣತಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ ಎಂದರು. 

ಕೇಂದ್ರಕ್ಕೆ ಬಡವರ ಯೋಜನೆ ಬಗ್ಗೆ ಗಮನ ಇಲ್ಲ. ಆದರೆ ಬಿಜೆಪಿ ಮೋದಿ ಸರಕಾರ 9 ವರ್ಷದಿಂದ ಏನು ಮಾಡಿದೆ. ಕೇವಲ ಚುನಾವಣೆ ಬಂದಾಗಲೆಲ್ಲ ಪಾಕಿಸ್ತಾನ, ಮಸೀದಿ, ಗಣೇಶ, ಅಂಜನಾದ್ರಿ ನೆನಪಾಗುತ್ತದೆ ಎಂದರು. ರಾಹುಲ್ ಗಾಂಧಿ ಎಂದರೆ ಬಿಜೆಪಿಗೆ ಭಯ ಉಂಟಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳು ಬರುತ್ತವೆ. ಗಂಗಾವತಿಯಲ್ಲಿ ಗಣೇಶ ಹಬ್ಬದ ಸಂದರ್ಭದಲ್ಲಿ ನಡೆದ ಗಲಭೆ ಬಗ್ಗೆ ಪೊಲೀಸರ ಮೇಲೆ ಕ್ರಮ ಕೈಗೊಂಡಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ