ಹೈಕಮಾಂಡ್‌ ಸಿದ್ದು ಬೆನ್ನಿಗೆ ನಿಂತಿದೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಹಿಂಜರಿಯಲ್ಲ: ಸಚಿವ ತಂಗಡಗಿ

Published : Sep 29, 2024, 11:59 AM IST
ಹೈಕಮಾಂಡ್‌ ಸಿದ್ದು ಬೆನ್ನಿಗೆ ನಿಂತಿದೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಹಿಂಜರಿಯಲ್ಲ: ಸಚಿವ ತಂಗಡಗಿ

ಸಾರಾಂಶ

ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ಜಾಮೀನಿನ ಮೇಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಮೊದಲು ಒತ್ತಾಯಿಸಲಿ. ನಂತರ ಸಿದ್ದರಾಮಯ್ಯ ರಾಜೀನಾಮೆ ಕೇಳಲಿ ಎಂದು ತಿರುಗೇಟು ನೀಡಿದ ಸಚಿವ ಶಿವರಾಜ್ ತಂಗಡಗಿ

ಕಾರಟಗಿ(ಸೆ.29):  ರಾಜ್ಯ ಸರ್ಕಾರದ ಎಲ್ಲ ಸಚಿವರು ಸೇರಿದಂತೆ 136 ಶಾಸಕರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಹೈಕಮಾಂಡ್ ಕೂಡ ಅವರ ಬೆನ್ನಿಗೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದು ಕಾನೂನು ಪ್ರಕ್ರಿಯೆ. ನಾವು ತನಿಖೆ ಎದುರಿಸುತ್ತೇವೆ ಎ೦ದು ಈಗಾಗಲೇ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಹಿಂಜರಿಯಲ್ಲ. ಬಗ್ಗುವುದಿಲ್ಲ, ಜಗ್ಗುವುದಿಲ್ಲ ಎಂದರು. 

ಕಾಂಗ್ರೆಸ್ ಸರ್ಕಾರ ಬೀಳುತ್ತೆ ಎನ್ನುವುದು ಬಿಜೆಪಿಯವರ ಭ್ರಮೆ: ಸಚಿವ ಶಿವರಾಜ ತಂಗಡಗಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚುನಾವಣಾ ಬಾಂಡ್‌ನ 6 ಸಾವಿರ ಕೋಟಿ ಹಗರಣದಲ್ಲಿ ಕೋರ್ಟ್ ಎಫ್ ಐಆರ್ ಹಾಕಲು ಸೂಚಿಸಿದೆ. ಕೇಂದ್ರ ಬಿಜೆಪಿ ಸರ್ಕಾರ ಮೊದಲು ಹಣಕಾಸು ಸಚಿವರ ರಾಜೀನಾಮೆ ಪಡೆಯಲಿ. ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ, ಜಾಮೀನಿನ ಮೇಲಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಮೊದಲು ಒತ್ತಾಯಿಸಲಿ. ನಂತರ ಸಿದ್ದರಾಮಯ್ಯ ರಾಜೀನಾಮೆ ಕೇಳಲಿ ಎಂದು ತಿರುಗೇಟು ನೀಡಿದರು. 

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಅವರ ಪಾಲಿಗೆ ಸಿಂಹಸ್ವಪ್ನವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಮತ್ತು ಜೆಡಿಎಸ್‌ನ ಪ್ರಯತ್ನಕ್ಕೆ ರಾಜಕೀಯವಾಗಿಯೂ ಸೋಲಾಗುತ್ತದೆ ಎಂದು ಹೇಳಿದರು. 

ಸಿದ್ದರಾಮಯ್ಯನವರು ರಾಜ್ಯದ ಬಡವರಿಗಾಗಿ ಜಾರಿಗೆ ತಂದಿರುವ ಅನ್ನಭಾಗ್ಯ, ಶೂಭಾಗ್ಯ, ಪಶುಭಾಗ್ಯ, ಶಾದಿ ಭಾಗ್ಯ, ಕ್ಷೀರಭಾಗ್ಯ ಇತ್ತೀಚಿಗಿನ ಗ್ಯಾರಂಟಿ ಯೋಜನೆಗಳು ಸೇರಿದಂತೆ ಜನಪರ ಯೋಜನೆಗಳು ಜನಮಾನಸದಲ್ಲಿ ಬೇರೂರುತ್ತಿರುವುದನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಅವರ ಕಳಂಕ ರಹಿತ ವ್ಯಕ್ತಿತ್ವಕ್ಕೆ ಕಪ್ಪು ಮಸಿ ಬಳಿಯುವ ದುರಾಲೋಚನೆ ಎಂದೂ ಈಡೇರದು ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: Namratha Gowda ಪ್ರೀತಿಯಲ್ಲಿದ್ದಾರಾ? ಆ ಕಪ್ಪು ಬ್ಯಾಂಡ್‌ ಕೊಟ್ಟ ಸುಳಿವಿನ ಬಗ್ಗೆ Karthik Mahesh ಏನಂದ್ರು?