
ಬೆಂಗಳೂರು, (ಅ.11): ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಬ್ಬರು ಸಚಿವರ ಖಾತೆ ಬದಲಾವಣೆಗೆ ಮುಂದಾಗಿದ್ದಾರೆ. ಸಚಿವರಾದ ಡಾ.ಕೆ. ಸುಧಾಕರ್ ಹಾಗೂ ಬಿ. ಶ್ರೀರಾಮುಲು ಅವರ ಖಾತೆಯನ್ನು ಬದಲಿಸಲು ಬಿಎಸ್ವೈ ತೀರ್ಮಾನಿಸಿದ್ದಾರೆ.
ಡಾಕ್ಟರ್ ಆಗಿರುವ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರಿಗೆ ಶ್ರೀರಾಮುಲು ಅವರ ಆರೋಗ್ಯ ಇಲಾಖೆ ಖಾತೆ ನೀಡಲಾಗಿದೆ. ಇನ್ನು ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ಕೊಡಲು ನಿರ್ಧರಿಸಿದ್ದಾರೆ.
ಕಾಂಗ್ರೆಸ್ ತೊರೆಯುತ್ತಾರಾ ಎಂ.ಬಿ.ಪಾಟೀಲ್ ..?
ಇದರೊಂದಿಗೆ ಡಾ.ಸುಧಾಕರ್ ಅವರಿಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜವಾಬ್ದಾರಿಯನ್ನು ಸಹ ಕೊಟ್ಟಿರುವುದು ಅಚ್ಚರಿಗೆ ಕಾರಣವಾಗಿದೆ.
ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಸಂವಹನ ಕೊರತೆ ಇದೆ ಎನ್ನುವ ದೂರುಗಳು ಕೇಳಿಬರುತ್ತಿದ್ದವು. ಅಲ್ಲದೇ ಕೊರೋನಾ ತಡೆಗೆ ಒಬ್ಬರ ಬಳಿಯೇ ಈ ಎರಡು ಖಾತೆ ಇದ್ದರೆ ಸೂಕ್ತ ಎನ್ನುವ ತೀರ್ಮಾನಕ್ಕೆ ಬರಲಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.