'ವಿಜಯೇಂದ್ರ ಬಿಜೆಪಿ ಪಾರ್ಟಿಗೆ ಬಾಹುಬಲಿ ಇದ್ದಂತೆ'

Published : Nov 10, 2020, 01:45 PM IST
'ವಿಜಯೇಂದ್ರ ಬಿಜೆಪಿ ಪಾರ್ಟಿಗೆ ಬಾಹುಬಲಿ ಇದ್ದಂತೆ'

ಸಾರಾಂಶ

ಕರ್ನಾಟಕದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಇದಕ್ಕೆ ವಿಜಯೇಂದ್ರ ಬಾಹುಬಲಿ ಇದ್ದಂತೆ ಎಂದು ಸಚಿವರು ಹಾಡಿ ಹೊಗಳಿದ್ದಾರೆ.

ಬೆಂಗಳೂರು, (ನ.10): ಬಿಜೆಪಿ ಪಾರ್ಟಿಗೆ ಬಿ.ವೈ. ವಿಜಯೇಂದ್ರ ಬಾಹುಬಲಿ ಇದ್ದಂತೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಶ್ಲಾಘಿಸಿದ್ದಾರೆ.

ಆರ್​ಆರ್​ ನಗರ ಹಾಗೂ ಶಿರಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಡುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಭೇಟಿ ಮಾಡಿದರು.

ನಮ್ಮ ಕೇಂದ್ರದ ನಾಯಕರ ಜತೆ ಸಿದ್ದರಾಮಯ್ಯ ಸಂಪರ್ಕ: ಬಾಂಬ್ ಸಿಡಿಸಿದ ಬಿಜೆಪಿ ಸಂಸದ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು,  ಮುಖ್ಯಮಂತ್ರಿಗಳು ಮತ್ತು ಅವರ ಆಡಳಿತದ ಮೇಲೆ ಜನ ನಂಬಿಕೆ ಇಟ್ಟಿದ್ದರು. ಆ‌ಕಾರಣದಿಂದ ಇವತ್ತು ನಾವು ಗೆಲ್ತಿದ್ದೇವೆ. ನಮ್ಮ ಯುವ ನಾಯಕ ವಿಜಯೇಂದ್ರ ಮುಂದಾಳತ್ವದಲ್ಲಿ ಗೆಲುವಾಗುತ್ತಿದೆ ಎಂದರು.

ನಾನು ಹಿಂದೆ ಒಂದು ಮಾತು ಹೇಳಿದ್ದೆ, ವಿಜಯೇಂದ್ರ ಎಲ್ಲೇ ಹೊದ್ರು ಗೆಲ್ಲುತ್ತಾರೆ ಅಂತ ಹೇಳಿದ್ದೆ, ಅದ್ರಂತೆ ಗೆಲುವು ಆಗುತ್ತಿದೆ. ಅವರು ಹೋದ ಕಡೆ ಎಲ್ಲಾ ಕಡೆ ಗೆಲ್ಲಿಸಿಕೊಂಡು ಬರ್ತಿದ್ದಾರೆ. ವಿಜಯೇಂದ್ರ ಅವರು ಬಿಜೆಪಿ ಪಾರ್ಟಿಗೆ ಬಾಹುಬಲಿ ಇದ್ದಂತೆ ಎಂದು ಸಚಿವ ಶ್ರೀರಾಮುಲು ಹಾಡಿ ಹೊಗಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ