
ಮೈಸೂರು, (ಜ.09): ಡಿ.ಕೆ.ಶಿವಕುಮಾರ್ ಸುಮ್ಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಅವರೆಷ್ಟು ಕಮಿಷನ್ ಪಡೆದಿದ್ದರು ಎಂಬುದನ್ನು ಬಹಿರಂಗಪಡಿಸಬೇಕಾಗುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಸಿದ್ದಾರೆ.
ಇಂದು (ಶನಿವಾರ) ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ಇದು ಕಮಿಷನ್ ಸರ್ಕಾರ' ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಕೂಡ 5 ವರ್ಷ ಕಾಂಗ್ರೆಸ್ ಸರ್ಕಾರಲ್ಲಿ ಇದ್ದವನು. ಎಲ್ಲಾ ವಿಚಾರ ಗೊತ್ತು. ಹೀಗಾಗಿ, ಕಮಿಷನ್ ಆರೋಪ ಶೋಭೆ ತರುವಂಥದ್ದಲ್ಲ ಎಂದರು.
'ತತ್ವ ಸಿದ್ಧಾಂತ ಒಪ್ಪಿದ್ದೇವೆ, ಜೀವನ ಪರ್ಯಂತ ಬಿಜೆಪಿಯಲ್ಲೇ ಇರುತ್ತೇವೆ'
ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕೋವಿಡ್ ಲಾಕ್ಡೌನ್ ಕಾರಣ ಏಳೆಂಟು ತಿಂಗಳು ಅಭಿವೃದ್ಧಿ ಕಾರ್ಯ ನಡೆದಿರಲಿಲ್ಲ. ಈಗ ಮತ್ತೆ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ. ಇಷ್ಟು ದಿನ ಮಲಗಿದ್ದ ಕಾಂಗ್ರೆಸ್ ನವರು ಈಗ ಎದ್ದಿದ್ದಾರೆ ಎಂದು ಕಿಡಿಕಾರಿದರು.
ಇದೇ ವೇಳೆ ಖರೀದಿಯಾದವರು ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ನಮ್ಮನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ. ಚೆಲುವರಾಯಸ್ವಾಮಿ ಹಾಗೂ ಇತರರು ಕಾಂಗ್ರೆಸ್ ಸೇರಿದಾಗ ಅವರನ್ನು ಮುಂಬೈನಲ್ಲಿ ಇರಿಸುವ ಜವಾಬ್ದಾರಿ ಹೊತ್ತಿದ್ದೇ ನಾನು. ಆಗ ಏನೆಲ್ಲ ನಡೆಯಿತು ಎಂದು ಹೇಳಲೇ ಎಂದು ತಿರುಗೇಟು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.