'ಕಾಂಗ್ರೆಸ್​​ ನಾಯಕರಿಗೆ ಪ್ರಚಾರದ ಗೀಳು…ಅವರೆಂದೂ ಬೆಳಕು ಹುಡುಕುವುದಿಲ್ಲ'

Published : Jul 27, 2020, 05:22 PM IST
'ಕಾಂಗ್ರೆಸ್​​ ನಾಯಕರಿಗೆ ಪ್ರಚಾರದ ಗೀಳು…ಅವರೆಂದೂ ಬೆಳಕು ಹುಡುಕುವುದಿಲ್ಲ'

ಸಾರಾಂಶ

 ಕಾಂಗ್ರೆಸ್​ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬಿಜೆಪಿಯಿಂದ ಪ್ರಜಾಪ್ರಭುತ್ವ, ಸಂವಿಧಾನಗಳು ನಾಶವಾಗುತ್ತಿವೆ ಎಂದು ಆರೋಪಿಸಿದ ಅವರು, ಸಂವಿಧಾನ ರಕ್ಷಿಸಿ..ಪ್ರಜಾಪ್ರಭುತ್ವ ಉಳಿಸಿ ಎಂದು ಘೋಷವಾಕ್ಯ ಕೂಗುತ್ತ ಮೆರವಣಿಗೆ ಮಾಡಿದ್ದು, ಇದಕ್ಕೆ ಸಚಿವ ಸುಧಾಕರ್ ಚಾಟಿ ಬೀಸಿದ್ದಾರೆ.

ಬೆಂಗಳೂರು, (ಜುಲೈ.27): ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್​ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಟ್ವೀಟ್‌ ಮೂಲಕ ಚಾಟಿ ಬೀಸಿರುವ ಸುಧಾಕರ್, ಕೊವಿಡ್​-19 ಇದ್ದರೂ ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸದೆ ಪ್ರತಿಭಟನೆ ನಡೆಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

'ವಿಪಕ್ಷದವರು ರಾತ್ರಿ ಸೂರ್ಯನನ್ನು ಹುಡುಕುತ್ತಾರೆ'

ಕೋವಿಡ್‌ ನಿಯಮಗಳನ್ನು ಗಾಳಿಗೆ ತೂರಿ,ಸಾಮಾಜಿಕ ಅಂತರವನ್ನು ಮರೆತು ಕಾಂಗ್ರೆಸ್‌ ಮುಖಂಡರು ಜಾತ್ರೆಯಂತೆ ರಾಜ್ಯಪಾಲರಿಗೆ ದೂರು ನೀಡಲು ಹೋಗಿರುವುದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ. ಇವರಿಗೆ ಸಾಮಾಜಿಕ ಕಳಕಳಿಗಿಂತ ಪ್ರಚಾರದ ಗೀಳು ಜಾಸ್ತಿ.ʼತಾವು ಇರುವ ಕತ್ತಲೆಯನ್ನು ಅರಿಯದವರು, ಬೆಳಕಿಗಾಗಿ ಎಂದೂ ಹುಡುಕುವುದಿಲ್ಲʼ

ಕಾಂಗ್ರೆಸ್​ ನಾಯಕರು ಕೊವಿಡ್​-19 ನಿಯಂತ್ರಣಾ ನಿಯಮಗಳನ್ನು ಗಾಳಿಗೆ ತೂರಿ, ಸಾಮಾಜಿಕ ಅಂತರವನ್ನು ಮರೆತು ಜಾತ್ರೆಯಂತೆ ಪ್ರತಿಭಟನೆ ಮಾಡಿದ್ದಲ್ಲದೆ, ರಾಜ್ಯಪಾಲರಿಗೆ ದೂರು ನೀಡಲು ಹೋಗಿದ್ದು ಅವರ ಸಾಮಾಜಿಕ ಕಳಕಳಿಯನ್ನು ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದರು.

ಇವರಿಗೆ ಸಮಾಜದ ಒಳಿತಿಗಿಂತಲೂ ಪ್ರಚಾರದ ಗೀಳು ಜಾಸ್ತಿ. ತಾವು ಇರುವ ಕತ್ತಲೆಯನ್ನು ಅರಿಯದವರು ಬೆಳಕಿಗಾಗಿ ಎಂದೂ ಹುಡುಕುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ