
ಮೈಸೂರು (ನ.12): ಬೆಂಗಳೂರಿನ ಆರ್ಆರ್ ನಗರ ಉಪಚುನಾವಣೆ ವಿಚಾರದಲ್ಲಿ ಆ ಕ್ಷೇತ್ರದ ವಾಸ್ತವ ಅರಿತುಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿದೆ.
ಸೋಲಿಗೆ ಕೇವಲ ಡಿಕೆ ಬ್ರದರ್ಸ್ ಹೊಣೆ ಮಾಡುವುದು ಸರಿಯಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಅವರ ತಮ್ಮ ಸಂಸದ ಡಿ.ಕೆ.ಸುರೇಶ್ ಕಷ್ಟಪಟ್ಟು ಚುನಾವಣೆಯಲ್ಲಿ ಓಡಾಡಿದ್ದಾರೆ. ಅವರಿಬ್ಬರನ್ನೇ ಯಾಕೆ ಸೋಲಿಗೆ ಹೊಣೆ ಮಾಡುವುದು? ಇಡೀ ಕಾಂಗ್ರೆಸ್ ಪಕ್ಷ ಆರ್ಆರ್ ನಗರ ಉಪಚುನಾವಣೆಯಲ್ಲಿ ಎಡವಿದೆ ಎಂದರು.
ಕೊಲೆಯಾದ ಬಿಜೆಪಿಗ ಯೋಗೇಶ್ ಪತ್ನಿ ಕೈ ಸೇರ್ಪಡೆ : ಮೂಲ ಕಾರಣ ಏನು..? .
ಆರ್ಆರ್ ನಗರದಲ್ಲಿ 50,000 ಲೀಡ್ನಲ್ಲಿ ಗೆಲ್ತೀವಿ ಅಂತ ನಾನು ಮೊದಲೇ ಹೇಳಿದ್ದೆ. ಈಗ ಅದೇ ರೀತಿಯ ಚುನಾವಣೆ ಫಲಿತಾಂಶ ಬಂದಿದೆ. ಸಂಪುಟ ಪುನಾರಚನೆ ಉಸಾಬರಿ ನಮಗೆ ಯಾಕೆ? ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ಏನು ಮಾಡಬೇಕು ಎಂಬುದು ಸಿಎಂ ಪರಮಾಧಿಕಾರ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.