ಎಐಸಿಸಿಯ ಮಹಿಳಾ ಪ್ರತಿನಿಧಿ ರಾಜೀನಾಮೆ ನೀಡಿದ್ದು ಯಾಕೆ : ಡಿಕೆಶಿಗೆ ಸುಧಾಕರ್ ಪ್ರಶ್ನೆ

Kannadaprabha News   | Asianet News
Published : Aug 29, 2021, 02:53 PM IST
ಎಐಸಿಸಿಯ ಮಹಿಳಾ ಪ್ರತಿನಿಧಿ ರಾಜೀನಾಮೆ ನೀಡಿದ್ದು ಯಾಕೆ : ಡಿಕೆಶಿಗೆ ಸುಧಾಕರ್ ಪ್ರಶ್ನೆ

ಸಾರಾಂಶ

ಬಿಎಸ್ ವೈ ಒಳ್ಳೆಯ ಕೆಲಸ ಮಾಡಿದರೂ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಯಾಕೆ ಎನ್ನುವ ಡಿಕೆಶಿ ಹೇಳಿಕೆ ಬಿಜೆಪಿ ಆಂತರಿಕ ವಿಚಾರ ಎಂದು ಸಚಿವ ಸುಧಾಕರ್  ತಿರುಗೇಟು   ಎಐಸಿಸಿಯ ಮಹಿಳಾ ಪ್ರತಿನಿಧಿ ರಾಜೀನಾಮೆ ನೀಡಿದ್ದು ಯಾಕೆ ಎಂದು ಮರು ಪ್ರಶ್ನೆ

ಚಿಕ್ಕಬಳ್ಳಾಪುರ (ಆ.29):   ಬಿಎಸ್ ವೈ ಒಳ್ಳೆಯ ಕೆಲಸ ಮಾಡಿದರೂ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ಯಾಕೆ ಎನ್ನುವ ಡಿಕೆಶಿ ಹೇಳಿಕೆಗೆ ಇದು ಬಿಜೆಪಿ ಆಂತರಿಕ ವಿಚಾರ ಎಂದು ಸಚಿವ ಸುಧಾಕರ್  ತಿರುಗೇಟು ನೀಡಿದ್ದಾರೆ. 

ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿದ ಆರೋಗ್ಯ ಸಚಿವ ಸುಧಾಕರ್ ಇದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ಹೈಕಮಾಂಡ್ ಬಿಎಸ್ ವೈ ಜೊತೆ ಚರ್ಚೆ ಮಾಡಿ ಬದಲಾವಣೆ ಮಾಡಿದ್ದಾರೆ ಎಂದರು. 

'ಸಿದ್ದು-ಡಿಕೆಶಿ ಕೇವಲ ಫೋಟೋ ಫ್ರೆಂಡ್ಸ್: ಇಬ್ಬರ ಮಧ್ಯೆ ಸಿಎಂ ಸ್ಥಾನಕ್ಕೆ ಪೈಪೋಟಿ'

ಬಿಜೆಪಿಯಲ್ಲಿ ಕೆಲವೊಂದು ನೀತಿಗಳಿವೆ. ಅವುಗಳಿಗೆ ಅನುಗುಣವಾಗಿ ನಿರ್ಧಾರ ಆಗಿವೆ. ಅನ್ಯಪಕ್ಷದ ನಾಯಕರು ನಮ್ಮ ಆಂತರಿಕ ವಿಚಾರಗಳಿಗೆ ತಲೆ ಹಾಕದಿರುವುದು ಒಳ್ಳೆಯದು ಎಂದು ಎಚ್ಚರಿಕೆ ನೀಡಿದರು. 

ಕಾಂಗ್ರೆಸ್ ನಲ್ಲಿ ಏನೇನಾಗುತ್ತಿದೆ ನಮಗೂ ಗೊತ್ತಿದೆ. ಎಐಸಿಸಿಯ ಮಹಿಳಾ ಪ್ರತಿನಿಧಿ ರಾಜೀನಾಮೆ ನೀಡಿದ್ದು ಯಾಕೆ? ಛತ್ತೀಸ್‌ಗಡ, ರಾಜಸ್ಥಾನ ದಲ್ಲಿ ಏನು ಆಗುತ್ತಿದೆ ನಮಗೂ ಗೊತ್ತಿದೆ.  ಆದರೆ ನಾವು ಬೇರೆ ಪಕ್ಷಗಳ ಬಗ್ಗೆ ಮಾತನಾಡಲ್ಲ ಅದು ನನ್ನ ಕೆಲಸವಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಘೋಷಣೆ
ದಾವಣಗೆರೆ ಮಾಜಿ ಸಂಸದ ಸಿದ್ದೇಶ್ವರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್; ಅಜಯ್‌ ಕುಮಾರ್ ಮನವೊಲಿಕೆ!