ಸಚಿವ ಸುನೀಲ್ ಕುಮಾರ್‌ ಮತ್ತೊಂದು ಜನ ಮೆಚ್ಚುವ ಕೆಲಸ

Published : Aug 15, 2021, 10:28 PM IST
ಸಚಿವ ಸುನೀಲ್ ಕುಮಾರ್‌ ಮತ್ತೊಂದು ಜನ ಮೆಚ್ಚುವ ಕೆಲಸ

ಸಾರಾಂಶ

*ಇಂಧನ ಸಚಿವ ಸುನೀಲ್ ಕುಮಾರ್‌ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ, ಹುಟ್ಟು ಹಬ್ಬದ ಸಂಭ್ರಮ  * ಮತ್ತೊಂದು ಜನ ಮೆಚ್ಚುಗೆ ಕಾರ್ಯ ಮಾಡಿದ ಸಚಿವ ಸುನೀಲ್ ಕುಮಾರ್ * ಊಟ ಮಾಡುತ್ತಾ ಅವರ ಸಮಸ್ಯೆಯನ್ನು ಆಲಿಸಿದ ಸಚಿವ

ಉಡುಪಿ, (ಆ.15): ನನ್ನ ನೋಡಲು ಬರುವವರು ಒಂದು ಕನ್ನಡ ಪುಸ್ತಕ ತನ್ನಿ ಎಂದು ಹೇಳುವ ಮೂಲಕ ಮಾದರಿಯಾಗಿದ್ದ ಇಂಧನ ಸಚಿವ ಸುನೀಲ್ ಕುಮಾರ್ ಅವರು ಇದೀಗ ಮತ್ತೊಂದು ಜನ ಮೆಚ್ಚಚುಗೆ ಕಾರ್ಯ ಮಾಡಿದ್ದಾರೆ.

ಹೌದು...ಇಂದು (ಆ.15) ಇಂಧನ ಸಚಿವ ಸುನೀಲ್ ಕುಮಾರ್‌ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ, ಹುಟ್ಟು ಹಬ್ಬದ ಸಂಭ್ರಮ. ಸಚಿವರಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸದೇ  ಸರಳ ಮತ್ತು ವಿಶೇಷವಾಗಿ ಆಚರಿಸಿಕೊಂಡು ಸಾರ್ವಜನಿಕರ ಗಮನ ಸೆಳೆದಿದ್ದಾರೆ. 

ನನ್ನ ನೋಡಲು ಬರುವವರು ಒಂದು ಕನ್ನಡ ಪುಸ್ತಕ ತನ್ನಿ : ಸಚಿವ ಸುನಿಲ್ ಕುಮಾರ್

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ, ಎಲ್ಲ ಲೈನ್ ಮ್ಯಾನ್‌ಗಳನ್ನು ತಮ್ಮ ಮನೆಗೆ ಆಹ್ವಾನಿಸಿ, ಅವರೊಂದಿಗೆ ಊಟ ಮಾಡಿದ್ದಾರೆ. ತಮ್ಮ ಹುಟ್ಟು ಹಬ್ಬದ ನಿಮಿತ್ತ ಲೈನ್ ಮ್ಯಾನ್‌ಗಳಿಗೆ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಲೈನ್ ಮ್ಯಾನ್‌ಗಳ ಮಧ್ಯೆ ಕುಳಿತು ಊಟ ಮಾಡಿದ್ದು, ಮಾತ್ರವಲ್ಲದೇ ಊಟ ಮಾಡುತ್ತಾ ಅವರ ಸಮಸ್ಯೆಯನ್ನು ಆಲಿಸಿದ್ದಾರೆ. 

ಸಚಿವರ ವಿಭಿನ್ನ ಹುಟ್ಟು ಹಬ್ಬ ಆಚರಣೆ ಸಾರ್ವಜನಿಕರ ಮೆಚ್ಚುಗೆ ಪಾತ್ರವಾಗಿದೆ. ಅಲ್ಲದೇ ಇತರರಿಗೂ ಮಾದರಿಯಾಗಿದೆ.

ಇನ್ನು ಸಚಿವರಾದ ಮೇಲೆ ತಮ್ಮನ್ನು ಅಭಿನಂದಿಸಲು ಬರುವವರು ಯಾರೂ ಹಾರ ತುರಾಯಿಗಳನ್ನು ತರಬೇಡಿ. ಕೊಡಲೇಬೇಕು ಅಂದಿದ್ದರೆ ಒಂದು ಕನ್ನಡ ಪುಸ್ತಕ ಕೊಂಡು ತನ್ನಿ. ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!