ಆರ್‌.ಆರ್‌.ನಗರ ಉಪಚುನಾವಣೆ: ಮುನಿರತ್ನ ಪರ ಸಚಿವ ಸೋಮಣ್ಣ ಪ್ರಚಾರ

Kannadaprabha News   | Asianet News
Published : Oct 23, 2020, 08:30 AM IST
ಆರ್‌.ಆರ್‌.ನಗರ ಉಪಚುನಾವಣೆ: ಮುನಿರತ್ನ ಪರ ಸಚಿವ ಸೋಮಣ್ಣ ಪ್ರಚಾರ

ಸಾರಾಂಶ

ನಾಗರಬಾವಿಯಲ್ಲಿ ಆಯೋಜಿಸಿದ ಸಭೆಯಲ್ಲಿ ಮುನಿರತ್ನ ಪರವಾಗಿ ಮತಯಾಚಿಸಿದ ವಿ.ಸೋಮಣ್ಣ| ಕೊಟ್ಟಿಗೆಪಾಳ್ಯ ಮತ್ತು ಮಾಳಗಾಳ ಪ್ರದೇಶಗಳಲ್ಲಿ ಸಂಚರಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿದ ಸಚಿವರು| 

ಬೆಂಗಳೂರು(ಅ.23): ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮುನಿರತ್ನ ಪರ ವಸತಿ ಸಚಿವ ವಿ.ಸೋಮಣ್ಣ ಗುರುವಾರ ವಿವಿಧೆಡೆ ಪ್ರಚಾರ ಕೈಗೊಂಡರು.

ನಾಗರಬಾವಿಯಲ್ಲಿ ಆಯೋಜಿಸಿದ ಸಭೆಯಲ್ಲಿ ಮುನಿರತ್ನ ಪರವಾಗಿ ಮತಯಾಚಿಸಿದರು. ಬಸವ ಸಮಿತಿ ಬಳಗವು ಪ್ರಚಾರ ಸಭೆಯನ್ನು ಆಯೋಜನೆ ಮಾಡಿತ್ತು. ಕ್ಷೇತ್ರದಲ್ಲಿ ಮುನಿರತ್ನ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿಸಿದರು. ಅಲ್ಲದೇ ಕೊಟ್ಟಿಗೆಪಾಳ್ಯ ಮತ್ತು ಮಾಳಗಾಳ ಪ್ರದೇಶಗಳಲ್ಲಿ ಸಂಚರಿಸಿ ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಪ್ರಚಾರ ನಡೆಸಿದರು.

ತನ್ನದೇ ಅಭ್ಯರ್ಥಿ ಬಿಟ್ಟು ಪಕ್ಷೇತರಗೆ ಜೆಡಿಎಸ್‌ ಬೆಂಬಲ!

ಈ ವೇಳೆ ಬಿಜೆಪಿ ಕೇಂದ್ರ ಜಿಲ್ಲಾ ಅಧ್ಯಕ್ಷ ಮಂಜುನಾಥ್‌ ಉಪಸ್ಥಿತರಿದ್ದರು. ಬಳಿಕ ಪಾಲಿಕೆ ಮಾಜಿ ಸದಸ್ಯ ವೆಂಕಟೇಶ ಬಾಬು ನಿವಾಸದಲ್ಲಿ ಸಭೆ ನಡೆಸಿ ಗೆಲುವಿನ ರಣತಂತ್ರ ರೂಪಿಸಲಾಯಿತು. ಕ್ಷೇತ್ರದ ವಿವಿಧೆಡೆ ಪಾದಯಾತ್ರೆ ಕೈಗೊಂಡು ಸಹ ಮುನಿರತ್ನ ಪರ ಮತಯಾಚಿಸಲಾಯಿತು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ
ಸಾರಿಗೆ ಇಲಾಖೆಗೆ ನಕಲಿ ವ್ಯಾಸಂಗ ಪತ್ರ ದಾಖಲೆ ನೀಡಿದರೆ ತನಿಖೆ: ಸಚಿವ ರಾಮಲಿಂಗಾರೆಡ್ಡಿ