ಇವರು ಗೆಲುವಿನ ಸರದಾರ : ಉಸ್ತುವಾರಿ ಹೊತ್ತಲ್ಲಿ ಸೋಲೇ ಇಲ್ಲ

Kannadaprabha News   | Asianet News
Published : May 03, 2021, 10:16 AM ISTUpdated : May 03, 2021, 10:34 AM IST
ಇವರು ಗೆಲುವಿನ ಸರದಾರ : ಉಸ್ತುವಾರಿ ಹೊತ್ತಲ್ಲಿ ಸೋಲೇ ಇಲ್ಲ

ಸಾರಾಂಶ

ಬಿಜೆಪಿಯ ಈ ಮುಖಂಡ ಉಸ್ತುವಾರಿ ವಹಿಸಿಕೊಂಡ ಕ್ಷೇತ್ರಗಳಲ್ಲಿ ಎಂದಿಗೂ ಸೋತಿಲ್ಲ. ಕಳೆದ ಅನೇಕ ವರ್ಷಗಳ ಕಾಲ ಬಿಜೆಪಿ ಗುರುತೇ ಇಲ್ಲದ ಕ್ಷೇತ್ರ ಸಬವಕಲ್ಯಾಣದಲ್ಲಿ ಬಿಜೆಪಿ ಗೆಲ್ಲು ಇವರ ತಂತ್ರಗಾರಿಕೆಯೇ ಪ್ರಮುಖ ಕಾರಣವಾಗಿದೆ. 

ಬೆಂಗಳೂರು (ಮೇ.03):  ಉಪಚುನಾವಣೆಗಳನ್ನು ನಡೆಸುವುದರಲ್ಲಿ ನಿಪುಣರಾಗಿರುವ ವಸತಿ ಸಚಿವ ವಿ.ಸೋಮಣ್ಣ ಅವರು ಇದುವರೆಗೆ ಉಸ್ತುವಾರಿಯಾಗಿ ನಿಭಾಯಿಸಿದ ಎಲ್ಲ ಉಪಚುನಾವಣೆಗಳಲ್ಲೂ ಬಿಜೆಪಿ ಗೆಲುವು ಸಾಧಿಸಿರುವುದು ಗಮನಾರ್ಹ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಅವರು 2010ರಲ್ಲಿ ಎದುರಾದ ಕಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ, 2011ರಲ್ಲಿ ಎದುರಾದ ಕೊಪ್ಪಳ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದುಕೊಟ್ಟಿದ್ದರು. ಬಳಿಕ 2016ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದರೂ ಆಗ ನಡೆದ ದೇವದುರ್ಗ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿ ಹೊತ್ತು ಜಯ ಗಳಿಸುವಂತೆ ನೋಡಿದರು.

ಪ್ರಬಲ ಮುಖಂಡ ಮಂಗಳಾ ಜಯದ ಹಿಂದೆ ಇದ್ದಿದ್ದು ಇವರ ತಂತ್ರಗಾರಿಕೆ

ಮುಂದೆ 2019ರಲ್ಲಿ ನಡೆದ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಸೋಮಣ್ಣ ಉಸ್ತುವಾರಿ ಗೆಲುವಿಗೆ ಕಾರಣವಾಗಿತ್ತು. ಅದೇ ವರ್ಷ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಸೋಲುಣಿಸಿ ಬಿಜೆಪಿಯ ಜಿ.ಎಸ್‌.ಬಸವರಾಜು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಸೋಮಣ್ಣ.

ಬಸವಕಲ್ಯಾಣ ಬೈಎಲೆಕ್ಷನ್‌: ಬಿಜೆಪಿ ಅಭ್ಯರ್ಥಿ ಶರಣು ಸಲಗರಗೆ ಪ್ರಚಂಡ ಗೆಲುವು

ಇದೀಗ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲೂ ಉಸ್ತುವಾರಿ ಹೊತ್ತು ಪಕ್ಷದ ಗೆಲುವಿಗೆ ಕಾರಣರಾಗಿದ್ದಾರೆ. ಕ್ಷೇತ್ರದ ಇತರ ಉಸ್ತುವಾರಿಗಳಾಗಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸ್ಥಳೀಯ ಸಂಸದ ಭಗವಂತ ಖೂಬಾ ಅವರೊಂದಿಗೆ ರಣತಂತ್ರ ರೂಪಿಸಿದ ಸೋಮಣ್ಣ ಅವರು ಕಾಂಗ್ರೆಸ್‌ ಅಭ್ಯರ್ಥಿಯ ಅನುಕಂಪದ ಅಲೆ ಹಾಗೂ ಪಕ್ಷದ ಬಂಡಾಯ ಅಭ್ಯರ್ಥಿ ಅಬ್ಬರ ಮೀರಿ ಬಿಜೆಪಿಗೆ ಗೆಲುವು ತಂದು ಕೊಡುವಲ್ಲಿ ಶ್ರಮಿಸಿದರು ಪಕ್ಷದ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ