
ಮೈಸೂರು (ನ.13): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು 'ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)' ಎಂದಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರು ತಮ್ಮ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರ ಕಮೆ ಕೋರಿದ್ದಾರೆ.
ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯಿಂದ ಜೆಡಿಎಸ್ ಕಾರ್ಯ ಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದರು.
ಕುಮಾರಸ್ವಾಮಿಗೆ 'ಕರಿಯ..' ಎಂದ ಜಮೀರ್, ಜನಾಂಗೀಯ ದ್ವೇಷದ ಮಾತಿಗೆ ಜೆಡಿಎಸ್ ಆಕ್ರೋಶ!
ನಾನು, ಕುಮಾರಸ್ವಾಮಿ ಆತ್ಮೀಯರಾಗಿದ್ದವರು. ಅವರು ನನ್ನನ್ನು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ದೊರ ದೊಡ್ಡ ವಿಚಾರ ಮಾಡ್ತಾ ಇದ್ದಾರೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.