
ವಿಜಯಪುರ(ಅ.08): ಬಿಜೆಪಿ ಅಧ್ಯಕ್ಷರು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ? ವಿಜಯೇಂದ್ರ ಏನು ಕಾಂಗ್ರೆಸ್ ಹೈಕಮಾಂಡಾ? ಎಂದು ವಸತಿ-ವಕ್ಫ್-ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರಶ್ನಿಸಿದರು.
ದಸರಾ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಕುರಿತಾಗಿ ನಗರದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಜೊತೆಗೆ ಇದ್ದೇವೆ ಎಂದು ಹೇಳಿದೆ. ರಾಜೀನಾಮೆ ಅಗತ್ಯ ಇಲ್ಲ ಎಂದು ಹೇಳಿದ್ದಾಗಿ ಸ್ಪಷ್ಟಪಡಿಸಿದರು.
ಬಿಜೆಪಿ ಚಾರ್ ಸೌ ಪಾರ್ ಅಂತಾ ಇತ್ತು, ಅಲ್ಲಾ ಮಿಯಾ ಅವರನ್ನ 240ಕ್ಕೆ ತಂದು ನಿಲ್ಸಿದ್ದಾನೆ: ಜಮೀರ್ ಅಹ್ಮದ್
ಪಕ್ಷದ ವಿಚಾರ ಹೇಳೋಕೆ ವಿಜಯೇಂದ್ರ ಯಾರು?:
ನೂರಕ್ಕೆ ನೂರು ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರಿಯುತ್ತಾರೆ. ನಮ್ಮ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಮಾತಾಡೋಕೆ ಹೂ ಈಸ್ ವಿಜಯೇಂದ್ರ ಎಂದು ಸಚಿವ ಜಮೀರ್ ಅಹ್ಮದ್ ಪ್ರಶ್ನಿಸಿದ್ದಾರೆ?. ನಮ್ಮ ಹೈಕಮಾಂಡ್ ಹೇಳಬೇಕು, ಇವರು ಯಾರು ಹೇಳೋಕೆ?. ರಾಜೀನಾಮೆ ಇಲ್ಲ ಎಂದು ವೇಣುಗೋಪಾಲ, ಸುರ್ಜೆವಾಲಾ ಬೆಂಗಳೂರಲ್ಲಿ ಪ್ರೆಸ್ಮೀಟ್ ಮಾಡಿ ಹೇಳಿದ್ದಾರೆ. ಹೈಕಮಾಂಡ್ ನಿಮ್ಮ ಜೊತೆ ಇದೆ ಎಂದು ಬೆಂಗಳೂರಿಗೆ ಬಂದು ಹೇಳಿದ್ದಾರೆ ಎಂದರು.
ಜೀವನ ಇರೋವರೆಗೂ ದಲಿತ ಸಿಎಂಗಾಗಿ ಹೋರಾಟ: ಸಂಸದ ರಮೇಶ ಜಿಗಜಿಣಗಿ
ಕಾರ್ಯಕ್ರಮವೊಂದರಲ್ಲಿ ಸತೀಶ ಜಾರಕಿಹೊಳಿ ಸಿಎಂ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜನ ಕೂಗ್ತಾರೆ. ಅಭಿಮಾನಿಗಳು ಕೂಗಿದ ತಕ್ಷಣ ಸಿಎಂ ಆಗಿ ಬಿಡ್ತಾರಾ? ನನ್ನ ಅಭಿಮಾನಿಗಳು ಕೂಗುತ್ತಾರೆ. ನಾನು ಸಿಎಂ ಆಗುತ್ತೇನಾ ಎಂದು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದರು.
ವಿಜಯೇಂದ್ರ ಸತೀಶ ಜಾರಕಿಹೊಳಿ ಭೇಟಿ ವಿಚಾರದ ಕುರಿತು ಮಾತನಾಡಿ, ನನಗೆ ಈ ಬಗ್ಗೆ ಮಾಹಿತಿ ಇಲ್ಲ. ನೀವ್ ಹೇಳುತ್ತಿದ್ದೀರಿ ನಾನು ಕೇಳುತ್ತಿದ್ದೇನೆ. ಬೇಕಾದರೆ ಮಾಹಿತಿ ತೆಗೆದುಕೊಂಡು ಹೇಳುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.