ಮುಸ್ಲಿಮರ ಓಟು ಬೇಡವೆಂದ ಮೇಲೆ ಯಾಕೆ ಕೇಳ್ತೀರಿ: ಎಚ್‌ಡಿಕೆಗೆ ಜಮೀರ್‌ ತಿರುಗೇಟು

Published : Nov 17, 2024, 07:37 PM IST
ಮುಸ್ಲಿಮರ ಓಟು ಬೇಡವೆಂದ ಮೇಲೆ ಯಾಕೆ ಕೇಳ್ತೀರಿ: ಎಚ್‌ಡಿಕೆಗೆ ಜಮೀರ್‌ ತಿರುಗೇಟು

ಸಾರಾಂಶ

ನನಗೆ ಲೋಕಾಯುಕ್ತ ನೋಟಿಸ್ ಬಂದಿರುವ ಬಗ್ಗೆ ಗೊತ್ತಿಲ್ಲ. ನೋಟಿಸ್ ಬಂದ ಮೇಲೆ ಹೋಗಲೇಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. 

ಮಂಗಳೂರು (ನ.17): ನನಗೆ ಲೋಕಾಯುಕ್ತ ನೋಟಿಸ್ ಬಂದಿರುವ ಬಗ್ಗೆ ಗೊತ್ತಿಲ್ಲ. ನೋಟಿಸ್ ಬಂದ ಮೇಲೆ ಹೋಗಲೇಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟಿಸ್‌ ನೀಡಿರುವ ಕುರಿತು ಮಾಧ್ಯಮದಲ್ಲಿ ಬರುತ್ತಿದೆ. ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ಅವರ ಕೆಲಸ. ಇಡಿಯವರು ಎಸಿಬಿಗೆ ಕಳುಹಿಸಿದ ಮೇಲೆ ಆ ಕೇಸ್ ಅಲ್ಲಿಂದ ಲೋಕಯುಕ್ತ‌ಕ್ಕೆ ಬಂದಿದೆ. ನೋಟಿಸ್ ಬಂದ ಮೇಲೆ ಹೋಗಲೇಬೇಕು ಎಂದರು.

ಮುಸ್ಲಿಮರ ಓಟು ಯಾಕೆ ಕೇಳ್ತೀರಿ?: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಜಮೀರ್‌, ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ. ಕುಮಾರಸ್ವಾಮಿ ತನಗೆ ಮುಸ್ಲಿಮರ ಮತ ಬೇಕಾಗಿಲ್ಲ ಅಂತ ಹೇಳಿದ್ದರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದೆ. ಮುಸ್ಲಿಮರ ಓಟು ಬೇಡ ಅಂತ ಹೇಳಿ ನಂತರ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ? ಇದು ಎಷ್ಟು ಸರಿ ಅಂತ ಕೇಳಿದ್ದು. ಮುಸ್ಲಿಮರು ಪಂಕ್ಚರ್ ಹಾಕುವವರು, ವೆಲ್ಡಿಂಗ್‌ ಮಾಡುವರು ಅಂತ ಲಘವಾಗಿ ಮಾತಾಡಿದ್ದಾರೆ. ನಂತರ ಯಾಕೆ ಅವರ ಬಳಿ ಓಟ್ ಕೇಳುತ್ತೀರಿ ಎಂದು ಪ್ರಶ್ನಿಸಿದರು.

ಚನ್ನಪಟ್ಟಣದಲ್ಲಿ ಯಾರೇ ಗೆದ್ದರೂ ಕೂದಲೆಳೆ ಅಂತರದಿಂದ ಗೆಲುವು: ಸಿ.ಪಿ.ಯೋಗೇಶ್ವರ್

ಯೂಟರ್ನ್‌ ಕುಮಾರಸ್ವಾಮಿ: ಅವರು ಯೂ ಟರ್ನ್ ಕುಮಾರಸ್ವಾಮಿ. ಹಾಗಾಗಿಯೇ ಬೇಗ ಹೇಳಿಕೆ ಬದಲಿಸಿದ್ದಾರೆ. ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತಾನೆ ಅವರಿಗೆ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಟೀಕಿಸಿದರು. ಕುಮಾರಸ್ವಾಮಿಗೆ ವೈಯಕ್ತಿಕವಾಗಿ ನಾನು ಹೇಳಿರುವುದೇ ವಿನಾ ಒಕ್ಕಲಿಗರ ವಿರುದ್ಧ ಅಲ್ಲ. ನಾನು ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಸ್ವಾಮೀಜಿ. 

ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದವನು. ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು ಎಂದರು. ‘ಕಾಲಾ’ ಹೇಳಿಕೆಗೆ ಡಿಕೆ ಶಿವಕುಮಾರ್‌ ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಜಮೀರ್‌, ನನ್ನದು ನನಗೆ, ಅವರ ಅಭಿಪ್ರಾಯ ಅವರು ಹೇಳಿದ್ದಾರೆ. ಅವರ ಹೇಳಿಕೆ ನಾನು ನೋಡಿಲ್ಲ. ಹೇಳಿಕೆ ನೋಡಿದ ಬಳಿಕ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

2 ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ: ನಿಖಿಲ್ ಕುಮಾರಸ್ವಾಮಿ

ಯೋಗಿಶ್ವರ್‌ ಗೆಲುವು ಖಚಿತ: ಚುನಾವಣೆ ಸಂದರ್ಭ ‘ಕಾಲಾ’ ಹೇಳಿಕೆಯಿಂದ ಧಕ್ಕೆ ಆಗಿದೆ ಎಂದು ಸಿ.ಪಿ. ಯೋಗೀಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಜಮೀರ್ ಬಂದಿದ್ದು ಪ್ಲಸ್ ಆಗಿದೆ, ಹೇಳಿಕೆಯಿಂದ ಸ್ವಲ್ಪ ಅನನುಕೂಲ ಅಗಿದೆ ಅಂತ ಯೋಗಿಶ್ವರ್ ಹೇಳಿದ್ದಾರೆ. ಬರೆದಿಟ್ಟುಕೊಳ್ಳಿ, ಚೆನ್ನಪಟ್ಟಣದಲ್ಲಿ ಏನೇನೂ ಆಗುವುದಿಲ್ಲ. ಅಲ್ಲಿ ಮೂರು ದಿನ ಪ್ರಚಾರ ಮಾಡಿದ್ದೇನೆ. ಯೋಗಿಶ್ವರ್ 18ರಿಂದ 20 ಸಾವಿರ ಮತದಿಂದ ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ