
ಹುಬ್ಬಳ್ಳಿ (ಅ.31): ನಾನು ಭಾರತೀಯ. 24 ಕ್ಯಾರೆಟ್ ಚಿನ್ನ. ಎಂದಿಗೂ ಕೋಮು-ದ್ವೇಷ ಹರಡುವ ಕೆಲಸ ಮಾಡಿಲ್ಲ. ಪ್ರಹ್ಲಾದ ಜೋಶಿ ಅವರಿಗೆ ಹಿಂದೂ- ಮುಸ್ಲಿಂ ಬಗ್ಗೆ ಮಾತನಾಡುವುದು ಬಿಟ್ಟು ಬೇರೆ ಗೊತ್ತಿಲ್ಲ. ನನ್ನನ್ನು ಸಂಪುಟದಿಂದ ಕಿತ್ತು ಹಾಕಲು ಸಾಧ್ಯವಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು ನೀಡಿದರು. ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮೀರ್ ಅಹ್ಮದ್ ಅವರು ಕೋಮು ದ್ವೇಷ ಹರಡುತ್ತಿದ್ದು, ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದರು.
ಎಲ್ಲರೂ ಭಾರತೀಯರೆ: ಭಾರತದಲ್ಲಿ ಇರುವವರೆಲ್ಲರೂ ಭಾರತೀಯರು. ಪ್ರಹ್ಲಾದ ಜೋಶಿ ಅವರು ರಾಜಕೀಯದಲ್ಲಿ ಜಾತಿ ಮಾಡಬಾರದು. ಮಾಡುವುದಿದ್ದರೆ ಅವರ ಮನೆಯಲ್ಲಿ ಮಾಡಿಕೊಳ್ಳಲಿ. ಮುಸ್ಲಿಮರು ಬಿಜೆಪಿಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ವಿರೋಧಿಸುತ್ತಿದ್ದಾರೆ. ಮತ ಹಾಕಿದರೆ ಮಾತ್ರ ನಾವು ಒಳ್ಳೆಯವರು. ಇಲ್ಲದಿದ್ದರೆ ಈ ರೀತಿ ಮಾತನಾಡುತ್ತಾರೆ ಎಂದರು.
ಅಕ್ರಮ ಕಟ್ಟಡ ತಡೆಗೆ ಶೀಘ್ರದಲ್ಲೇ ಪ್ರಬಲ ಕಾನೂನು: ಸಿಎಂ ಸಿದ್ದರಾಮಯ್ಯ
ಉಪಚುನಾವಣೆಯಿಂದಾಗಿ ಮುನ್ನೆಲೆಗೆ: ರೈತರು ಅನ್ನದಾತರು. ಅವರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾನೂನು ಇದ್ದು ಯಾರ ಆಸ್ತಿಯನ್ನು ಯಾರೂ ಕಿತ್ತುಕೊಳ್ಳಲು ಬರುವುದಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ವಿಷಯವನ್ನು ಬಿಜೆಪಿಯವರು ಮುನ್ನೆಲೆಗೆ ತಂದಿದ್ದಾರೆ, ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ವಕ್ಫ್ ಅದಾಲತ್ ಮಾಡುತ್ತಿದ್ದೇವೆ. ವಕ್ಫ್ ಬೋರ್ಡ್ ಸರ್ಕಾರದಿಂದ ಒಂದು ಇಂಚು ಜಾಗವನ್ನೂ ಪಡೆದಿಲ್ಲ. ವಕ್ಫ್ ಬೋರ್ಡ್ನಲ್ಲಿ ಸದ್ಯ 23 ಸಾವಿರ ಎಕರೆ ಜಾಗ ಇದ್ದು, 84 ಸಾವಿರ ಎಕರೆ ಒತ್ತುವರಿ ಆಗಿದೆ. ಮುಜರಾಯಿ ಇಲಾಖೆಯ 38 ಸಾವಿರ ಎಕರೆ ಜಾಗದಲ್ಲಿ 700 ಎಕರೆ ಒತ್ತುವರಿಯಾಗಿದೆ. ಅದರ ತೆರವಿಗೆ ನಾನೂ ಕೈಜೋಡಿಸುತ್ತೇನೆ ಎಂದರು.
ಬಾಯಿ ಬಡಿದುಕೊಂಡ್ರೂ ಬಿಜೆಪಿ ಟಿಕೆಟ್ಗೆ ಎಚ್ಡಿಕೆ ಒಪ್ಪಿರಲಿಲ್ಲ: ಮುಖಾಮುಖಿಯಲ್ಲಿ ಸಿ.ಪಿ.ಯೋಗೇಶ್ವರ್
ಎಲ್ಲ ದಾಖಲೆ ನೀಡಲು ಸೂಚನೆ: ವಿಜಯಪುರದಲ್ಲಿ ರೈತರನ್ನು ಬಿಜೆಪಿಯವರು ಎತ್ತಿಕಟ್ಟುತ್ತಿದ್ದಾರೆ. ನಾನು ವಕ್ಫ್ ಸಚಿವನಾಗಿ ಹೇಳುತ್ತಿದ್ದೇನೆ, ಯಾವ ರೈತರಿಗೂ ತೊಂದರೆ ಆಗುವುದಿಲ್ಲ. ವಕ್ಫ್ ಆಸ್ತಿ ವಿವಾದ ಸಂಬಂಧ ಬಿಜೆಪಿ ರಚಿಸಿರುವ ತಂಡಕ್ಕೆ ಎಲ್ಲ ದಾಖಲೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.