ಸಿಎಂ ಕುರ್ಚಿಯಲ್ಲಿ ಟಗರು ಕುಳಿತಿದೆ, ಕೆಳಗೆ ಇಳಿಸುವುದು ಅಷ್ಟು ಸುಲಭವಿಲ್ಲ: ಜಮೀರ್ ಅಹ್ಮದ್

Published : Oct 09, 2024, 08:31 AM IST
ಸಿಎಂ ಕುರ್ಚಿಯಲ್ಲಿ ಟಗರು ಕುಳಿತಿದೆ, ಕೆಳಗೆ ಇಳಿಸುವುದು ಅಷ್ಟು ಸುಲಭವಿಲ್ಲ: ಜಮೀರ್ ಅಹ್ಮದ್

ಸಾರಾಂಶ

ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಯಾದ್ರೆತಾನೆ ಚರ್ಚೆ. ಆ ಕುರ್ಚಿಯಲ್ಲಿ ಟಗರು (ಸಿದ್ದರಾಮಯ್ಯ) ಕುಳಿತಿದೆ. ಆ ಟಗರನ್ನು ಕೆಳಗೆ ಇಳಿಸುವುದು ಅಷ್ಟು ಸುಲಭವಿಲ್ಲ: ಸಚಿವ ಜಮೀರ್ ಅಹ್ಮದ್

ವಿಜಯಪುರ(ಅ.09):  ಜಾತಿಗಣತಿ ಜಾರಿ ವಿಚಾರವಾಗಿ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನತೆಗೆದುಕೊಳ್ಳಲಾಗುವುದೆಂದು ಸಿಎಂ ತಿಳಿಸಿದ್ದು, ಗುರುವಾರ ನಡೆಯುವ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಬಹುದು. ಆಗ ಏನು ಚರ್ಚೆ ಆಗುತ್ತದೆ ನೋಡೋಣ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಜಾತಿಗಣತಿ 2013ರಿಂದಲೇ ಪೆಂಡಿಂಗ್ ಇದೆ. ನಮ್ಮ ಸರ್ಕಾರ ಹೋದ ಬಳಿಕ ಸಮ್ಮಿಶ್ರ ಸರ್ಕಾರ ದಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಈ ಬಗ್ಗೆ ಗಮನ ಕೊಡಲಿಲ್ಲ. ಹಾಗಾಗಿ ಈಗ ಚರ್ಚಿಸುತ್ತೇವೆ ಎಂದರು. 

ವಿಜಯೇಂದ್ರ ಹೇಳಿದಾಕ್ಷಣ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕಾ?: ಸಚಿವ ಜಮೀರ್ ಅಹಮ್ಮದ್

ಸಿಎಂ ಕುರ್ಚಿಯಲ್ಲಿ ಟಗರು ಕುಳಿತಿದೆ: 

ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಯಾದ್ರೆತಾನೆ ಚರ್ಚೆ. ಆ ಕುರ್ಚಿಯಲ್ಲಿ ಟಗರು (ಸಿದ್ದರಾಮಯ್ಯ) ಕುಳಿತಿದೆ. ಆ ಟಗರನ್ನು ಕೆಳಗೆ ಇಳಿಸುವುದು ಅಷ್ಟು ಸುಲಭವಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ