ಬಿಜೆಪಿಯಲ್ಲಿ 20 ಬಣಗಳಿದ್ದು, ಒಂದೊಂದು ಬಣವೂ ಪಾದಯಾತ್ರೆ ಮಾಡಲಿ: ಎಂ.ಬಿ.ಪಾಟೀಲ್‌

Published : Aug 13, 2024, 06:30 AM IST
ಬಿಜೆಪಿಯಲ್ಲಿ 20 ಬಣಗಳಿದ್ದು, ಒಂದೊಂದು ಬಣವೂ ಪಾದಯಾತ್ರೆ ಮಾಡಲಿ: ಎಂ.ಬಿ.ಪಾಟೀಲ್‌

ಸಾರಾಂಶ

ಕೊರೋನಾ ಕಾಲದ ₹2 ಸಾವಿರ ಕೋಟಿ ಹಣ ದುರುಪಯೋಗ, ಮಾರಿಷಸ್‌ನಲ್ಲಿ ₹10,000 ಕೋಟಿ ಇಟ್ಟಿರೋ ಹಗರಣ, ಭೋವಿ ನಿಗಮದ ಹಗರಣ, ತಾಂಡಾ ನಿಗಮದ ಹಗರಣ, ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣ, ಇಂತಹ 20 ಹಗರಣಗಳ ಕುರಿತು ಬಿಜೆಪಿಯವರು ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ 

ವಿಜಯಪುರ(ಆ.13):  ಬಿಜೆಪಿಯಲ್ಲಿ 20 ಬಣಗಳಿವೆ. ಆರ್.ಅಶೋಕ ಬಣ, ವಿಜಯೇಂದ್ರ ಬಣ, ಪ್ರಹ್ಲಾದ ಜೋಶಿ ಬಣ, ಸಂತೋಷ‌ ಬಣ, ಅಶ್ವತ್ಥ ನಾರಾಯಣ ಬಣ, ಯತ್ನಾಳ-ಜಾರಕಿಹೊಳಿ ಬಣ, ಸಿ.ಟಿ.ರವಿ ಬಣ... ಹೀಗೆ 20 ಬಣಗಳಿವೆ. ಒಂದೊಂದು ಬಣವೂ ಒಂದೊಂದು ಪಾದಯಾತ್ರೆ ಮಾಡಲಿ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವ್ಯಂಗ್ಯವಾಡಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊರೋನಾ ಕಾಲದ ₹2 ಸಾವಿರ ಕೋಟಿ ಹಣ ದುರುಪಯೋಗ, ಮಾರಿಷಸ್‌ನಲ್ಲಿ ₹10,000 ಕೋಟಿ ಇಟ್ಟಿರೋ ಹಗರಣ, ಭೋವಿ ನಿಗಮದ ಹಗರಣ, ತಾಂಡಾ ನಿಗಮದ ಹಗರಣ, ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಹಗರಣ, ಇಂತಹ 20 ಹಗರಣಗಳ ಕುರಿತು ಬಿಜೆಪಿಯವರು ಪಾದಯಾತ್ರೆ ಮಾಡಲಿ ಎಂದು ಸವಾಲು ಹಾಕಿದರು. 

ಜನರ ದಾರಿ ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್‌ನಿಂದ ರಾಜಕೀಯವಾಗಿ ಪಾದಯಾತ್ರೆ: ಸಚಿವ ಆರ್‌.ಬಿ.ತಿಮ್ಮಾಪೂರ

ಬಿಜೆಪಿಯವರು ‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಸುಳ್ಳು ಪ್ರಚಾರ ಮಾಡಿದರು. ಹೀಗಾಗಿ, ಜನಾಂದೋಲನ ಮೂಲಕ ಅದಕ್ಕೆ ತಕ್ಕ ಉತ್ತರ ನೀಡಿದ್ದೇವೆ. ಐತಿಹಾಸಿಕ ಜನಾಂದೋಲನ‌ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಿದ್ದರು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!