'ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ : ಯಾವಾಗ ಏನು ಆಗುತ್ತೋ ಹೇಳಲಾಗದು'

Kannadaprabha News   | Asianet News
Published : Aug 09, 2021, 10:31 AM ISTUpdated : Aug 09, 2021, 10:51 AM IST
'ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ : ಯಾವಾಗ ಏನು ಆಗುತ್ತೋ ಹೇಳಲಾಗದು'

ಸಾರಾಂಶ

ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಆಕ್ರೋಶವಿದೆ ಯಾವುತ್ತಾದರೂ ಒಂದು ದಿನ ಆಕ್ರೋಶ ಸ್ಫೋಟವಾಗಬಹುದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ದಕ್ಕೂ ಅಸಮಾಧಾನವಿದೆ

ಬೆಂಗಳೂರು (ಆ.09):  ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಆಕ್ರೋಶವಿದೆ. ಯಾವುತ್ತಾದರೂ ಒಂದು ದಿನ ಆಕ್ರೋಶ ಸ್ಫೋಟವಾಗಬಹುದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಆ ಪಕ್ಷದ ಆಂತರಿಕ ವಿಚಾರ. ಇಷ್ಟುಮಾತ್ರ ನಿಜ ಅನ್ನಿಸುತ್ತಿದೆ. ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ದಕ್ಕೂ ಅಸಮಾಧಾನವಿದೆ. ಮಂತ್ರಿಗಳಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೂ ಆಕ್ರೋಶವಿದೆ. ಯಾವಾಗ ಏನು ಆಗುತ್ತದೆ ಎಂದು ಹೇಳಲು ಆಗುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದರು.

ಖಾತೆ ಬಗ್ಗೆ ಅಪಸ್ವರವೆತ್ತಿದ ಮುಖಂಡರಿಗೆ ಟಾಂಗ್ ನೀಡಿದ ಸಚಿವ

ಈಗಾಗಲೇ ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾದರು ಅನೇಕರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.  ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂದು ಕೆಲ ಶಾಸಕರು ಅಸಮಾಧಾನಗೊಂಡರೆ ಇನ್ನು ಕೆಲವರು ಸಿಕ್ಕ ಸಚಿವ ಸ್ಥಾನದ ಬಗ್ಗೆಯೂ ಅಸಮಾದಾನಗೊಂಡಿದ್ದಾರೆ. ವಲಸಿಗರಾದ ಎಂಟಿಬಿ ನಾಗರಾಜ್ ಹಾಗು ಆನಂದ್ ಸಿಂಗ್ ಸಿಕ್ಕ ಖಾತೆಗಳ ಬಗ್ಗೆ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಯಾವಾಗ ಬೇಕಾದ ಆಕ್ರೋಶ ಸ್ಫೋಟವಾಗಬಹುದೆಂದು ಭವಿಷ್ಯ ನುಡಿದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!