ಮೋದಿ ಸರ್ಕಾರದಿಂದ ಅಧಿಕಾರ ದುರ್ಬಳಕೆ: ಸೋನಿಯಾ ಗಾಂಧಿ ವಾಗ್ದಾಳಿ

Published : Apr 12, 2023, 01:02 AM IST
ಮೋದಿ ಸರ್ಕಾರದಿಂದ ಅಧಿಕಾರ ದುರ್ಬಳಕೆ: ಸೋನಿಯಾ ಗಾಂಧಿ ವಾಗ್ದಾಳಿ

ಸಾರಾಂಶ

ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಪ್ರತಿಯೊಂದು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ವಿಷಯವನ್ನು ದೇಶಾದ್ಯಂತ ಜನರ ಬಳಿಗೆ ನೇರವಾಗಿ ಕೊಂಡೊಯ್ಯಲು ಕಾಂಗ್ರೆಸ್‌ ನಿರ್ಧರಿಸಿದೆ. ಅಲ್ಲದೇ ಸಂವಿಧಾನವನ್ನು ಉಳಿಸಲು ಸಮಾನ ಮನಸ್ಕ ಪಕ್ಷಗಳ ಜೊತೆ ಕೈಜೋಡಿಸಲು ನಾವು ಸಿದ್ಧವಾಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.

ನವದೆಹಲಿ (ಏ.12): ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಪ್ರತಿಯೊಂದು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ವಿಷಯವನ್ನು ದೇಶಾದ್ಯಂತ ಜನರ ಬಳಿಗೆ ನೇರವಾಗಿ ಕೊಂಡೊಯ್ಯಲು ಕಾಂಗ್ರೆಸ್‌ ನಿರ್ಧರಿಸಿದೆ. ಅಲ್ಲದೇ ಸಂವಿಧಾನವನ್ನು ಉಳಿಸಲು ಸಮಾನ ಮನಸ್ಕ ಪಕ್ಷಗಳ ಜೊತೆ ಕೈಜೋಡಿಸಲು ನಾವು ಸಿದ್ಧವಾಗಿದ್ದೇವೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Soniya gandhi) ಹೇಳಿದ್ದಾರೆ.

‘ದ ಹಿಂದೂ’ ಪತ್ರಿಕೆಗೆ ಲೇಖನ ಬರೆದಿರುವ ಅವರು, ಮೋದಿ ಸರ್ಕಾರ(Narendra Modi government) ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗಗಳನ್ನು ವ್ಯವಸ್ಥಿತವಾಗಿ ಛಿದ್ರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕ(BJP and RSS Leaders)ರಿಂದ ಹೆಚ್ಚಾಗುತ್ತಿರುವ ದ್ವೇಷ ಭಾಷಣಗಳನ್ನು ಮೋದಿ ನಿರ್ಲಕ್ಷಿಸಿದ್ದಾರೆ. ದೇಶದಲ್ಲಿ ಧಾರ್ಮಿಕ ಹಬ್ಬಗಳು ಸಂತೋಷ ಮತ್ತು ಆಚರಣೆಗಳನ್ನು ಕಳೆದುಕೊಂಡಿದ್ದು ಇತರರನ್ನು ಬೆದರಿಸುವ ಹಬ್ಬಗಳಾಗಿವೆ. ಜಾತಿ, ಧರ್ಮ, ಆಹಾರ, ಲಿಂಗ ಅಥವಾ ಭಾಷೆಯ ಕಾರಣದಿಂದಾಗಿ ಇತರರಲ್ಲಿ ಭಯ ಮೂಡಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿ ವಿದೇಶದಲ್ಲಿ ಭೇಟಿಯಾಗೋ ಉದ್ಯಮಿಗಳು ಯಾರು..? ಬಿಜೆಪಿ ಪ್ರಶ್ನೆ

ಇಂತಹ ಅನೇಕ ಸಮಸ್ಯೆಗಳು ದೇಶದಲ್ಲಿದ್ದರೂ ಮೋದಿ ಇವುಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಈ ವಿಷಯಗಳಿಂದ ದೂರವಿರಲು ಇಬ್ಬಗೆಯ ಭಾಷಣಗಳನ್ನು ಮಾಡುತ್ತಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಲವಾರು ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳು ದೇಶದ ಪ್ರಜಾಪ್ರಭುತ್ವದ ನಿರ್ಣಾಯಕ ಪರೀಕ್ಷೆಯಾಗಿದೆ. ಹಾಗಾಗಿ ಇದನ್ನು ನೇರವಾಗಿ ಜನರಿಗೆ ತಲುಪಿಸಲು ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಯಾತ್ರೆ ಕೈಗೊಂಡಂತೆ ಯೋಜನೆಯನ್ನು ಕೈಗೊಳ್ಳಲಿದೆ. ಅಲ್ಲದೇ ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಸಮಾನ ಮನಸ್ಕ ಪಕ್ಷಗಳ ಜೊತೆ ಕಾಂಗ್ರೆಸ್‌ ಕೈ ಜೋಡಿಸಲಿದೆ ಎಂದು ಅವರು ಹೇಳಿದ್ದಾರೆ.

ಅಷ್ಟೇ ಅಲ್ಲದೇ ನಿರುದ್ಯೋಗ ಬಡತನ, ಹಣದುಬ್ಬರ ಮತ್ತು ಸಾಮಾಜಿಕ ಒಡಕಿನ ಬಗ್ಗೆ ವಿಪಕ್ಷಗಳು ಮಾತನಾಡದಂತೆ ತಡೆಯಲು ಅಧಿವೇಶನ ಸರಿಯಾಗಿ ನಡೆಯದಂತೆ ಬಿಜೆಪಿ ನೋಡಿಕೊಂಡಿದೆ. ವಿಪಕ್ಷಗಳ ಬಾಯಿ ಮುಚ್ಚಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡಿದೆ. ಇವು ದಾಖಲಿಸಿರುವ ಶೇ.95ರಷ್ಟುಮೊಕದ್ದಮೆಗಳು ವಿಪಕ್ಷಗಳ ನಾಯಕರ ವಿರುದ್ಧವೆ ಇವೆ ಎಂದು ಅವರು ಆರೋಪಿಸಿದರು.

ಇಸ್ರೇಲ್‌ ತಂತ್ರಾಂಶ ಬಳಸಿ ಮೋದಿ ಸರ್ಕಾರದಿಂದ ಬೇಹುಗಾರಿಕೆ: ಕಾಂಗ್ರೆಸ್‌

ಇದು ಮೋದಿ ದ್ವೇಷದ ಸ್ಪಷ್ಟಉದಾಹರಣೆ: ರಿಜಿಜು

ಪ್ರಜಾಪ್ರಭುತ್ವ ಮತ್ತು ಸಂಸ್ಥೆಗಳ ಸ್ವಾತಂತ್ರ್ಯದ ಕುರಿತಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಬರೆದಿರುವ ಲೇಖನ ಸಂಪೂರ್ಣವಾಗಿ ಭ್ರಮೆಯಿಂದ ಕೂಡಿದೆ. ಇದು ಮೋದಿ ದ್ವೇಷಕ್ಕೆ ಸ್ಪಷ್ಟಉದಾಹರಣೆ ಎಂದು ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಮತ್ತು ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ನ್ಯಾಯಾಂಗದ ಸ್ವಾತಂತ್ರ್ಯದ ಬಗ್ಗೆ ಮಾತನಾಡುತ್ತಿರುವುದು ಭ್ರಮೆಯಿಂದ ಕೂಡಿದೆ ಎಂದು ರಿಜಿಜು ಹೇಳಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಹಿಸಾಸಕ್ತಿಗಳನ್ನು ಬದಿಗೊತ್ತಿ, ಮೋದಿ ದ್ವೇಷವನ್ನಷ್ಟೇ ಇದು ಸಾರುತ್ತದೆ ಎಂದು ಪ್ರಧಾನ್‌ ಕುಟುಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ
ಚುಂಚ ಶ್ರೀ ಬಳಿ ಕೈ ಮುಗಿದು ಎಚ್‌ಡಿಕೆ ಕ್ಷಮೆ