ಮನೆ, ಆಭರಣ ಕಳೆದುಕೊಂಡ್ರೂ ಪ್ರತಿ ವರ್ಷದ 'ಸಂಕ್ರಾಂತಿ' ಸಹಾಯ ಮರೆತಿಲ್ಲ ಶಾಸಕ ಅಖಂಡ

Published : Jan 12, 2021, 07:43 PM IST
ಮನೆ, ಆಭರಣ ಕಳೆದುಕೊಂಡ್ರೂ ಪ್ರತಿ ವರ್ಷದ 'ಸಂಕ್ರಾಂತಿ' ಸಹಾಯ ಮರೆತಿಲ್ಲ ಶಾಸಕ ಅಖಂಡ

ಸಾರಾಂಶ

ಗಲಭೆ ಪ್ರಕರಣದಿಂದ  ಅಖಂಡ ಶ್ರೀನಿವಾಸ್ ಮೂರ್ತಿ  ಮಾನಸಿಕವಾಗಿ ಇನ್ನೂ ಘಟನೆಯಿಂದ ಹೊರಬಂದಿಲ್ಲ. ಆದರೂ ತಮ್ಮ ಪ್ರತಿ ವರ್ಷದ ಕಾಯಕ ಮರೆತಿಲ್ಲ.

ಬೆಂಗಳೂರು, (ಜ.12): ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಬೆಂಗಳೂರಿನ ಡಿಜೆ ಹಳ್ಳಿ ಹಾಗು ಕೆ.ಜೆ. ಹಳ್ಳಿ ಗಲಭೆಯಲ್ಲಿ ಮನೆ ಜೊತೆಗೆ ವಡವೆ, ಹಣ ಕಳೆದುಕೊಂಡಿದ್ದು, ನ್ಯಾಯಕ್ಕಾಗಿ ಅಲಿಯುತ್ತಿದ್ದಾರೆ.

ಮಾನಸಿಕವಾಗಿ ಇನ್ನೂ ಘಟನೆಯಿಂದ ಹೊರಬಂದಿಲ್ಲ. ಆದರೂ ಕ್ಷೇತ್ರದ ಬಡ ಜನರಿಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಹಾರ ಸಾಮಗ್ರಿ ವಿತರಣೆ ಮಾಡಿದ್ದಾರೆ.

ಬೆಂಗಳೂರು ಗಲಭೆ: ಸ್ವಪಕ್ಷದವರೇ ಮನೆಗೆ ಬೆಂಕಿ, ಕಾಂಗ್ರೆಸ್‌ ಶಾಸಕ ಅಖಂಡ ನೋವು

ಹೌದು...ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಪ್ರತಿವರ್ಷದಂತೆ ಈ ಭಾರಿಯೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕ್ಷೇತ್ರದ ಸುಮಾರು 20 ಸಾವಿರ ಬಡ ಜನರಿಗೆ  ದಿನಸಿ ವಿತರಣೆ ಮಾಡಿದರು.

ಕಳೆದ 15 ವರ್ಷಗಳಿಂದ ಸಂಕ್ರಾಂತಿ ಹಬ್ಬದಂದು ಈ ಕಾರ್ಯಕ್ರಮವನ್ನು ಮಾಡಿಕೊಂಡು ಬಂದಿದ್ದು, ಈ ಸಲ ಈ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕೃಷ್ಣಭೈರೇಗೌಡ ಚಾಲನೆ ನೀಡಿದರು. 3 ಕೆ.ಜಿ ಅಕ್ಕಿ, ಬೆಲ್ಲ, ಎಣ್ಣೆ, ಶಾವಿಗೆ ಪಟ್ಟಣ ವಿತರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?