
ಬೆಂಗಳೂರು, (ಸೆ.20): ಅಚ್ಚರಿ ಎಂಬಂತೆ ಸಿಎಂ ರೇಸ್ನಲ್ಲಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ್ ಬೆಲ್ಲದ್ಗೆ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನವೂ ಸಿಗಲಿಲ್ಲ.
ಇದರಿಂದ ಅವರು ತೀವ್ರ ಅಸಮಾಧಾನಗೊಂಡಿದ್ದು, ಬಿಜೆಪಿ ತೊರೆಯುತ್ತಾರೆ ಎನ್ನುವ ಗಾಸಿಪ್ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ.
ಸಿಗದ ಸಚಿವ ಸ್ಥಾನ: ಅತೃಪ್ತ ಶಾಸಕರಿಂದ ಸಭೆ, ಬೆಲ್ಲದ ಹೇಳಿದ್ದೇನು?
ಇದು ಸ್ವತಃ ಅರವಿಂದ್ ಬೆಲ್ಲದ್ ಕಿವಿಗೆ ಬಿದ್ದಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ಕೊಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹಾಗಾದ್ರೆ ಅವರ ಸ್ಪಷ್ಟನೆಯಲ್ಲಿ ಏನೆಲ್ಲಾ ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ ನೋಡಿ.
ಆತ್ಮೀಯರೇ.,
ಕೆಲ ಮಾಧ್ಯಮಗಳಲ್ಲಿ ನಾನು ಭಾರತೀಯ ಜನತಾ ಪಕ್ಷವನ್ನು ತೊರೆಯುವುದಕ್ಕೆ ಚಿಂತನೆ ನಡೆಸಿದ್ದೇನೆ ಎಂಬ ಸುಳ್ಳು ಹಾಗೂ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ. ಇದು ಸತ್ಯಕ್ಕೆ ದೂರವಾದ & ದುರುದ್ದೇಶಪೂರ್ವಕ ವರದಿ. ಸಾಮಾಜಿಕ ಜಾಲ ತಾಣಗಳಲ್ಲೂ ಇದೇ ಬಗೆಯ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.
ಈ ವಿಚಾರವನ್ನು ನಾನು ನಿರ್ಲಕ್ಷಿಸಬಹುದಿತ್ತು. ಆದರೆ ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ.
ನಾನು ಬಿಜೆಪಿ ತೊರೆಯುವ / ಅನ್ಯ ಪಕ್ಷ ಸೇರುವುದನ್ನು ಕಾಯಾ, ವಾಚಾ, ಮನಸಾ ಕಲ್ಪಿಸಲೂ ಸಾಧ್ಯವಿಲ್ಲ. ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಹಬ್ಬಿರುವ ವದಂತಿಗೆ ಯಾರೂ ಬೆಲೆ ಕೊಡಬಾರದು ಎಂದು ಈ ಮೂಲಕ ಪ್ರಾರ್ಥಿಸುತ್ತೇನೆ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೂ ನಾನು ಸಿದ್ಧತೆ ನಡೆಸಿದ್ದೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.