ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ ಕಾಲಿಗೆ ಬಿದ್ದು ಸಾಕಾಗಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

Published : Nov 29, 2025, 05:45 AM IST
Beluru Gopalakrishna

ಸಾರಾಂಶ

ರಾಜ್ಯದಲ್ಲಿನ ಅಧಿಕಾರ ಹಂಚಿಕೆಯ ಊಹಾಪೋಹಗಳಿಗೆ ಸದ್ಯದಲ್ಲೇ ತೆರೆಬೀಳಲಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಹೈಕಮಾಂಡ್‌ನ ಕೈ-ಕಾಲಿಗೂ ಬಿದ್ದು ಸಾಕಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗ (ನ.29): ಊಹಾಪೋಹಗಳಿಗೆ ಸದ್ಯದಲ್ಲೇ ತೆರೆಬೀಳಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರಿಗೆ ಅವರು ಪ್ರಸ್ತುತ ರಾಜ್ಯ ರಾಜಕಾರಣದ ಗೊಂದಲಗಳ ಬಗ್ಗೆ ಪ್ರತಿಕ್ರಿಯಿಸಿ, ಗೊಂದಲವೇನೇ ಇರಲಿ, ಸಂಪುಟ, ವಿಸ್ತರಣೆ ಮತ್ತು ಬದಲಾವಣೆಯಾಗಲೇಬೇಕು ಎಂಬುದು ನನ್ನ ಒತ್ತಾಯ. ಈಗಾಗಲೇ ಹೈಕಮಾಂಡ್ ಸೇರಿದಂತೆ ಎಲ್ಲರ ಮನೆ ಬಾಗಿಲಿಗೂ ಹೋಗಿ ಕಾಲಿಗೆ ಬಿದ್ದಿದ್ದೇನೆ.

ಹೈಕಮಾಂಡಿನ ಕೈ-ಕಾಲಿಗೂ ಬಿದ್ದು ಸಾಕಾಗಿದೆ. ಎಲ್ಲರೂ ಪ್ರೀತಿಯಿಂದ ಮಾತನಾಡಿಸಿ ಭರವಸೆ ನೀಡಿದ್ದಾರೆ. ಗೊಂದಲ ಆದಷ್ಟು ನಿವಾರಣೆಯಾಗಲೇಬೇಕು. ತಡವಾದಷ್ಟು ಪಕ್ಷಕ್ಕೆ ಹೆಚ್ಚಿನ ಹಾನಿಯಾಗಲಿದೆ ಎಂದರು. ಶೀಘ್ರದಲ್ಲೇ ಹೈಕಮಾಂಡ್ ಗೊಂದಲಕ್ಕೆ ಇತಿಶ್ರೀ ಹಾಡಲೇಬೇಕು. ಸಚಿವ ಮಧುಬಂಗಾರಪ್ಪನವರು ಕೂಡ ನಾನು ಸಚಿವ ಆಗಲಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದಲ್ಲಿ ಹೆಚ್ಚಿನ ಹಣ ನೀಡುತ್ತಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ 40 ಲಕ್ಷ ರು. ವೆಚ್ಚದ ರಸ್ತೆ ಕಾಮಗಾರಿ ಹಾಗೂ ವೀರಾಪುರ ಗ್ರಾಮದ 10 ಲಕ್ಷ ರು. ವೆಚ್ಚದ ರೆಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಕಳೆದ ವರ್ಷ ಮುಂಚಿತವಾಗಿ ಮುಂಗಾರು ಪ್ರಾರಂಭವಾಗಿದ್ದು, ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿತ್ತು. ಈ ವರ್ಷ ಹಳೆಯ ಕಾಮಗಾರಿಯೊಂದಿಗೆ ಹೊಸ ಕಾಮಗಾರಿಗಳು ಮುಕ್ತಾಯಗೊಳ್ಳಲಿವೆ. ಇನ್ನೂ ಹಲವಾರು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕಾಗಿದ್ದು, ಹಂತ ಹಂತವಾಗಿ ಪೂರ್ಣಗೊಳಿಸುವುದಾಗಿ ಹೇಳಿದರು.

ಹುತ್ತಾದಿಂಬಾ ಗ್ರಾಮದ ಬನಶಂಕರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 10 ಲಕ್ಷ ರು. ಬಿಡುಗಡೆಯಾಗಿದ್ದು, ಇನ್ನೂ ಹೆಚ್ಚಿನ ಅನುದಾನ ಕೇಳುತ್ತಿದ್ದೀರಿ. ತಾಲೂಕಿನ ಹಲವು ಗ್ರಾಮಗಳಲ್ಲಿ ಸಮುದಾಯ ಭವನ, ದೇವಸ್ಥಾನ ಜೀರ್ಣೋದ್ಧಾರಗಳಿಗೆ ಹಣ ನೀಡಬೇಕಾಗಿದ್ದು, ಈಗಾಗಲೇ 147 ದೇವಸ್ಥಾನಗಳಿಗೆ ಅನುದಾನ ನೀಡಲಾಗಿದೆ. ಮಾರಿಜಾತ್ರೆ, ಊರಿನ ಹಬ್ಬಗಳ ಸಂದರ್ಭದಲ್ಲಿ ಜನರಿಗೆ ಸಹಕಾರಿಯಾಗಲು ಆ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ನಿಮ್ಮೂರಿನ ದೇವಸ್ಥಾನಕ್ಕೆ ಇನ್ನೂ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

India Latest News Live: 19ರ ತರುಣನ ಜೊತೆ ಮಗಳ ಮದುವೆಗೆ ನಿರಾಕರಿಸಿದ ಪ್ರೇಯಸಿ ಮನೆಯವರು - ಕರೆಂಟ್ ಟವರ್ ಏರಿ ಪ್ರಿಯಕರನ ಹೈಡ್ರಾಮಾ
63 ಪರ್ಸೆಂಟ್‌ ಭ್ರಷ್ಟಾಚಾರ ಬಿಜೆಪಿ ಕಾಲದ್ದು, ಅಶೋಕ್‌ಗೆ ಅರ್ಥವಾಗೇ ಇಲ್ಲ: ಸಿಎಂ